Homeಮುಖಪುಟರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡದಿದ್ದರೆ, ನಾವು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿಯವರು ಜಾರ್‌ಗ್ರಾಮ್‌ನಲ್ಲಿ ನಡೆದ ಬುಡಕಟ್ಟು ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರವು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ (ನರೇಗಾ) ಅಡಿ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ಅದರ ವಿರುದ್ಧ ರಾಜ್ಯದ ಆದಿವಾಸಿಗಳು ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ನರೇಗಾ  ಕಾನೂನಿನ ಪ್ರಕಾರ, “ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಕನಿಷ್ಠ 100 ದಿನಗಳ ಕೌಶಲರಹಿತ ಉದ್ಯೋಗವನ್ನು ಖಾತರಿ ನೀಡಲಾಗಿದೆ. ಕೆಲಸ ಮುಗಿದ 15 ದಿನಗಳಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ನಿಗದಿತ ಕೂಲಿ ಹಣವನ್ನು ಜಮಾ ಮಾಡಬೇಕು.”

“100 ದಿನಗಳ ಉದ್ಯೋಗ ಖಾತರಿ ಯೋಜನೆ ಅನುದಾನ ಕಡ್ಡಾಯವಾಗಿದೆ” ಎಂದಿರುವ ಬ್ಯಾನರ್ಜಿ, “ಇದರ ನಡುವೆಯೂ, ಒಂದು ವರ್ಷದ ಹಿಂದೆ, ನಾನು ಈ ಬಗ್ಗೆ ಮಾತನಾಡಲು ಪ್ರಧಾನಿಯವರನ್ನು ಭೇಟಿ ಮಾಡಿದ್ದೆ. ನಾನು ನಿಮ್ಮ ಕಾಲಿಗೆ ಬಿದ್ದು ಬೇಡಿಕೊಳ್ಳಬೇಕೇ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ನರೇಗಾ ಯೋಜನೆಯಡಿ ನೀಡಬೇಕಾದ ಬಾಕಿ ಮೊತ್ತವನ್ನು ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಪಾವತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಬಾಕಿ ಅನುದಾನವನ್ನು ನಿಲ್ಲಿಸುವುದಾಗಿ ಕೇಂದ್ರ ಸರ್ಕಾರ ಬೆದರಿಕೆ ಹಾಕುತ್ತಿದೆ. ನಾವು ಜಿಎಸ್ಟಿಯನ್ನು ಸಹ ನಿಲ್ಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ನೀವು ಇಲ್ಲಿ ತೆರಿಗೆಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲ. ನಮಗೆ ಕಾನೂನುಬದ್ಧವಾಗಿ ಬರಬೇಕಾದ ಬಾಕಿ ಮೊತ್ತವನ್ನು ತಡೆಹಿಡಿಯಲು ಸಾಧ್ಯವಿಲ್ಲ. ಪಶ್ಚಿಮಬಂಗಾಳದ ಜನರಿಗೆ ನೀವು ಕೊಡಬೇಕಾದ ಅನುದಾನವನ್ನು ನಿರಾಕರಿಸುತ್ತಿದ್ದೀರಿ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

ಆಗಸ್ಟ್ 5ರಂದು ಬ್ಯಾನರ್ಜಿಯವರು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣವನ್ನು ಬಿಡುಗಡೆ ಮಾಡುವಂತೆ ನೀವು ಮಧ್ಯಪ್ರವೇಶಿಸಬೇಕು ಎಂದು ಕೋರಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಕೋರ್ ಸೆಕ್ಟರ್‌ಗಳ ಖಾತೆಯಲ್ಲಿ 1,00,968.44 ಕೋಟಿ ರೂ.ಗಳು ಬಾಕಿ ಉಳಿದಿರುವುದರಿಂದ, ರಾಜ್ಯ ಸರ್ಕಾರ ತನ್ನ ವ್ಯವಹಾರಗಳನ್ನು ನಡೆಸುವುದಕ್ಕೆ, ರಾಜ್ಯದ ಜನರನ್ನು ನೋಡಿಕೊಳ್ಳುವುದಕ್ಕೆ ಅತ್ಯಂತ ಕಷ್ಟಕರವಾಗುತ್ತಿದೆ ಎಂಬುದನ್ನು ನೀವು ಪ್ರಶಂಸಿಸುತ್ತೀರಿ” ಎಂದು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ಮಮತಾ ಬ್ಯಾನರ್ಜಿಯವರು ಉಲ್ಲೇಖಿಸಿದ್ದರು.

ನರೇಗಾ, ಆವಾಸ್ ಯೋಜನೆ ಮತ್ತು ಗ್ರಾಮೀಣ ಸಡಕ್ ಯೋಜನೆಗಾಗಿ ಕೇಂದ್ರವು 17,996.32 ಕೋಟಿ ರೂಪಾಯಿ ಹಣವನ್ನು ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರಿಯಾದ ಕ್ರಮ,ಉಳಿದ ರಾಜ್ಯಗಳು ಇದನ್ನ ಬೆಂಬಲಿಸಿ ಅನುಸರಿಸಲಿ,ಮುಖ್ಯವಾಗಿ ಕರ್ನಾಟಕ ರಾಜ್ಯ ಈ ಕೆಲಸ ಮಾ ಡೀತೆ? ಕರ್ನಾಟಕದ ಪಾಲು ಒಕ್ಕೂಟ ಸರ್ಕಾರ ಬಿಡುಗಡೆ ಮಾಡಲಿ,ನಾವು ಸರ್ವಾಧಿಕಾರದ ಆಡಳಿತದಲ್ಲಿ ಇಲ್ಲಾ ಪ್ರಜಾಪ್ರಭುತ್ವದಲ್ಲಿ ಇದ್ದೇವೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...