Homeಮುಖಪುಟಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

- Advertisement -
- Advertisement -

ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೆಟ್ಟದಾಗಿ ಸೋಲಲಿದೆ ಎಂದು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್ ಪತ್ರಿಕೆಯ ಕರಣ್ ಥಾಪರ್‌ರವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ನಾನು ಮೋದಿಯವರ ಸ್ಥಾನದಲ್ಲಿದ್ದಲ್ಲಿದ್ದರೆ ಹಗರಣ ಹೊರಬಂದ ಮೊದಲ ದಿನವೇ ಅದಾನಿ ಕೈಬಿಡುತ್ತಿದ್ದೆ. ಏಕೆಂದರೆ ಅದರಿಂದ ಬಹುದೊಡ್ಡ ಹಾನಿಯುಂಟಾಗಿದೆ. ಮುಂದಿನ ದಿನಗಳಲ್ಲಿ ಅದು ಮತ್ತಷ್ಟು ಕೆಳಕ್ಕೆ ಇಳಿಯಲಿದೆ” ಎಂದಿದ್ದಾರೆ.

ಅದಾನಿ ಹಗರಣವು ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ಪರಿಣಾಮ ಬೀರಿದ ಅತ್ಯಂತ ಗಂಭೀರವಾಗಿದೆ. ಪ್ರಧಾನಿ ಸಂಪೂರ್ಣವಾಗಿ ಮೌನವಾಗಿದ್ದಾರೆ ಮತ್ತು ಅವರು ಅದಾನಿಯನ್ನು ಸಮರ್ಥಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಹಲವರು ಭಾವಿಸಿದ್ದಾರೆ. ಪ್ರಧಾನಿಯವರು ಇದನ್ನು ಸರಿಯಾಗಿ ನಿಭಾಯಿಸಿದ್ದಾರೆಯೇ? ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

ನಾನು ಯೂಟ್ಯೂಬ್‌ನಲ್ಲಿ ಒಂದು ಹಾಡು ಕೇಳುತ್ತಿದ್ದೆ. ಪ್ರಭಾ ಮೌರ್ಯ ಎಂಬ ದಲಿತ ಹುಡುಗಿ ಹಾಡಿರುವುದು. ಹೇ ಚಾಯ್‌ವಾಲಾಹೇ ನಾ ಗಾಯ್‌ವಾಲಾ ಹೇ (ಅವನು ಚಹ ಮಾರುವವನು, ನಾನು ಹಾಡು ಹಾಡುವವಳು. ಅಂಬಾನಿ ಅದಾನಿಗೆ ದೇಶವನ್ನೇ ಮಾರಿಬಿಡಬಹುದು) ಎಂಬ ಹಾಡು ಈ ಭಾಷೆಯಲ್ಲಿ ಲೋಕಲ್ ಯಾಸೆಯಲ್ಲಿ ಜನರನ್ನು ತಲುಪಿದರೆ ಹಾನಿಯಾಗುತ್ತದೆಯೇ ಇಲ್ಲವೇ ನೀವೇ ಅರ್ಥ ಮಾಡಿಕೊಳ್ಳಿ.

1989ರಲ್ಲಿ ವಿ.ಪಿ ಸಿಂಗ್ ಬೋಫೋರ್ಸ್ ಹಗರಣವನ್ನು ಚುನಾವಣಾ ವಿಷಯವನ್ನಾಗಿ ಮಾಡಿ ರಾಜೀವ್ ಗಾಂಧಿಯನ್ನು ಸೋಲಿಸಿದ್ದರು. 2024 ರಲ್ಲಿ ಅದಾನಿ ಹಗರಣ ಚುನಾವಣಾ ವಿಷಯವಾಗಬಹುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಖಂಡಿತವಾಗಿಯೂ ಚುನಾವಣಾ ವಿಷಯವಾಗಲಿದೆ. ಇದು ಬಗೆಹರಿಯದೆ ಮುಂದುವರೆದಲ್ಲಿ ಅದಾನಿ ಮೋದಿಯವರನ್ನು ಮುಗಿಸಬಹುದು ಎಂದರು.

ಅದಾನಿ ಸರ್ಕಾರದ ನಡುವಿನ ಒನ್ ಟು ಒನ್ ಫೈಟ್ ನಡೆದರೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಯಾವ ಮಟ್ಟಕ್ಕೆ ಎಂದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅತಿ ಕಡಿಮೆ ಸೀಟುಗಳು ಬರಬಹುದು. ಸಂಸತ್ತಿನಲ್ಲಿ ಮೋದಿ ಅದಾನಿ ಹಗರಣದ ಕುರಿತು ಒಂದೂ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ಏಕೆಂದರೆ ಅದಾನಿಯಿಂದ ಮೋದಿಯವರಿಗೆ ಪ್ರಯೋಜನವಿದೆ. ಹಾಗಾಗಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು 20,000 ಕೋಟಿ ರೂ ಎಲ್ಲಿಂದ ಬಂತು ಎಂಬ ಪ್ರಶ್ನೆ ಕೇಳಿದ್ದರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮಲಿಕ್, “ಅದಕ್ಕೆ ಮೋದಿಯವರು ಉತ್ತರ ನೀಡಿಲ್ಲ. ಬದಲಿಗೆ ರಾಹುಲ್ ಗಾಂಧಿಯನ್ನು ಸಂಸತ್ತಿನಿಂದ ಅಮಾನತ್ತು ಮಾಡಲಾಗಿದೆ. ಇದು ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ನಡೆಯಾಗಿದೆ. ಸ್ಪೀಕರ್ ಅತಿ ದೊಡ್ಡ ತಪ್ಪು ಮಾಡಿದ್ದಾರೆ. ರಾಹುಲ್ ಗಾಂಧಿಯ ಹಕ್ಕು ಕಸಿಯಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...