Homeಮುಖಪುಟಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

- Advertisement -
- Advertisement -

ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೆಟ್ಟದಾಗಿ ಸೋಲಲಿದೆ ಎಂದು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್ ಪತ್ರಿಕೆಯ ಕರಣ್ ಥಾಪರ್‌ರವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ನಾನು ಮೋದಿಯವರ ಸ್ಥಾನದಲ್ಲಿದ್ದಲ್ಲಿದ್ದರೆ ಹಗರಣ ಹೊರಬಂದ ಮೊದಲ ದಿನವೇ ಅದಾನಿ ಕೈಬಿಡುತ್ತಿದ್ದೆ. ಏಕೆಂದರೆ ಅದರಿಂದ ಬಹುದೊಡ್ಡ ಹಾನಿಯುಂಟಾಗಿದೆ. ಮುಂದಿನ ದಿನಗಳಲ್ಲಿ ಅದು ಮತ್ತಷ್ಟು ಕೆಳಕ್ಕೆ ಇಳಿಯಲಿದೆ” ಎಂದಿದ್ದಾರೆ.

ಅದಾನಿ ಹಗರಣವು ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ಪರಿಣಾಮ ಬೀರಿದ ಅತ್ಯಂತ ಗಂಭೀರವಾಗಿದೆ. ಪ್ರಧಾನಿ ಸಂಪೂರ್ಣವಾಗಿ ಮೌನವಾಗಿದ್ದಾರೆ ಮತ್ತು ಅವರು ಅದಾನಿಯನ್ನು ಸಮರ್ಥಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಹಲವರು ಭಾವಿಸಿದ್ದಾರೆ. ಪ್ರಧಾನಿಯವರು ಇದನ್ನು ಸರಿಯಾಗಿ ನಿಭಾಯಿಸಿದ್ದಾರೆಯೇ? ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

ನಾನು ಯೂಟ್ಯೂಬ್‌ನಲ್ಲಿ ಒಂದು ಹಾಡು ಕೇಳುತ್ತಿದ್ದೆ. ಪ್ರಭಾ ಮೌರ್ಯ ಎಂಬ ದಲಿತ ಹುಡುಗಿ ಹಾಡಿರುವುದು. ಹೇ ಚಾಯ್‌ವಾಲಾಹೇ ನಾ ಗಾಯ್‌ವಾಲಾ ಹೇ (ಅವನು ಚಹ ಮಾರುವವನು, ನಾನು ಹಾಡು ಹಾಡುವವಳು. ಅಂಬಾನಿ ಅದಾನಿಗೆ ದೇಶವನ್ನೇ ಮಾರಿಬಿಡಬಹುದು) ಎಂಬ ಹಾಡು ಈ ಭಾಷೆಯಲ್ಲಿ ಲೋಕಲ್ ಯಾಸೆಯಲ್ಲಿ ಜನರನ್ನು ತಲುಪಿದರೆ ಹಾನಿಯಾಗುತ್ತದೆಯೇ ಇಲ್ಲವೇ ನೀವೇ ಅರ್ಥ ಮಾಡಿಕೊಳ್ಳಿ.

1989ರಲ್ಲಿ ವಿ.ಪಿ ಸಿಂಗ್ ಬೋಫೋರ್ಸ್ ಹಗರಣವನ್ನು ಚುನಾವಣಾ ವಿಷಯವನ್ನಾಗಿ ಮಾಡಿ ರಾಜೀವ್ ಗಾಂಧಿಯನ್ನು ಸೋಲಿಸಿದ್ದರು. 2024 ರಲ್ಲಿ ಅದಾನಿ ಹಗರಣ ಚುನಾವಣಾ ವಿಷಯವಾಗಬಹುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಖಂಡಿತವಾಗಿಯೂ ಚುನಾವಣಾ ವಿಷಯವಾಗಲಿದೆ. ಇದು ಬಗೆಹರಿಯದೆ ಮುಂದುವರೆದಲ್ಲಿ ಅದಾನಿ ಮೋದಿಯವರನ್ನು ಮುಗಿಸಬಹುದು ಎಂದರು.

ಅದಾನಿ ಸರ್ಕಾರದ ನಡುವಿನ ಒನ್ ಟು ಒನ್ ಫೈಟ್ ನಡೆದರೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಯಾವ ಮಟ್ಟಕ್ಕೆ ಎಂದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಅತಿ ಕಡಿಮೆ ಸೀಟುಗಳು ಬರಬಹುದು. ಸಂಸತ್ತಿನಲ್ಲಿ ಮೋದಿ ಅದಾನಿ ಹಗರಣದ ಕುರಿತು ಒಂದೂ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ಏಕೆಂದರೆ ಅದಾನಿಯಿಂದ ಮೋದಿಯವರಿಗೆ ಪ್ರಯೋಜನವಿದೆ. ಹಾಗಾಗಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು 20,000 ಕೋಟಿ ರೂ ಎಲ್ಲಿಂದ ಬಂತು ಎಂಬ ಪ್ರಶ್ನೆ ಕೇಳಿದ್ದರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮಲಿಕ್, “ಅದಕ್ಕೆ ಮೋದಿಯವರು ಉತ್ತರ ನೀಡಿಲ್ಲ. ಬದಲಿಗೆ ರಾಹುಲ್ ಗಾಂಧಿಯನ್ನು ಸಂಸತ್ತಿನಿಂದ ಅಮಾನತ್ತು ಮಾಡಲಾಗಿದೆ. ಇದು ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ನಡೆಯಾಗಿದೆ. ಸ್ಪೀಕರ್ ಅತಿ ದೊಡ್ಡ ತಪ್ಪು ಮಾಡಿದ್ದಾರೆ. ರಾಹುಲ್ ಗಾಂಧಿಯ ಹಕ್ಕು ಕಸಿಯಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...