Homeಮುಖಪುಟಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

ಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

- Advertisement -
- Advertisement -

“ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 1,000 ರೂ. ಠೇವಣಿ ಇಡಲಾಡಲಾಗುವುದು” ಎಂದು ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಕುಮಾನ್‌ನ ಯುಎಸ್ ನಗರದ ಕಾಶಿಪುರ ಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ. ಯುಎಸ್ ನಗರವು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ತವರು ಜಿಲ್ಲೆಯಾಗಿದೆ.

ಕೇಜ್ರಿವಾಲ್ ಮಾತನಾಡಿ, “ಹಣ ಎಲ್ಲಿಂದ ಬರುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ಉತ್ತರಾಖಾಂಡ್‌‌ ಬಜೆಟ್ ಗಾತ್ರ ಸುಮಾರು 55,000 ಕೋಟಿ ರೂ.. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲವೇ? ಯಾವುದೇ ಕಾಮಗಾರಿಯಾದರೂ ಎಷ್ಟು ಭ್ರಷ್ಟಾಚಾರ ರಾಜ್ಯದಲ್ಲಿದೆ? ರಾಜ್ಯದಲ್ಲಿ ಶೇ.60, ಶೇ.80ರಷ್ಟು ಭ್ರಷ್ಟಾಚಾರ ಇದೆ ಎನ್ನುತ್ತಾರೆ ಕೆಲವರು. ಶೇ. 20ರಷ್ಟು ಭ್ರಷ್ಟಾಚಾರವಿದೆ ಎಂದು ಹೇಳೋಣ. ಹೀಗಾಗಿ 55,000 ಕೋಟಿ ರೂ.ಗಳಲ್ಲಿ ಶೇ. 20 ಅಂದರೆ 11,000 ಕೋಟಿ ರೂ.ಗಳಾಗುತ್ತದೆ. ಇಷ್ಟು ಹಣ ರಾಜಕಾರಣಿಗಳ ಜೇಬಿಗೆ, ಸ್ವಿಸ್ ಬ್ಯಾಂಕ್‌ಗೆ ಹೋಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಮಹಿಳೆಯರಿಗೆ ಮಾಸಿಕವಾಗಿ ಒಂದು ಸಾವಿರ ರೂ. ನೀಡುವುದಾದರೆ 3,000 ಕೋಟಿ ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಬೇಕಾಗುತ್ತದೆ ಎಂದು ಹೇಳಿರುವ ಕೇಜ್ರಿವಾಲ್‌, “ಸ್ವಿಸ್ ಬ್ಯಾಂಕ್‌ಗಳಿಗೆ ಹೋಗುತ್ತಿರುವ ಹಣವನ್ನು ನಾನು ನಿಲ್ಲಿಸುತ್ತೇನೆ. ಹಾಗಾಗಿ ಸ್ವಿಸ್ ಬ್ಯಾಂಕ್ ಗಳಿಗೆ ಹೋಗುವ ಹಣ ಇಲ್ಲಿನ ಮಹಿಳೆಯರ ಜೇಬಿಗೆ ಸೇರುತ್ತದೆ” ಎಂದು ಭರವಸೆ ನೀಡಿದ್ದಾರೆ.

ಈ ವರ್ಷ ಕೇಜ್ರಿವಾಲ್ ಅವರು ಉತ್ತರಾಖಾಂಡ್‌ ರಾಜ್ಯಕ್ಕೆ ಐದನೇ ಬಾರಿಗೆ ಭೇಟಿ ನೀಡಿದ್ದಾರೆ. ನವೆಂಬರ್ 21ರಂದು ಹರಿದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, “ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ, ದೆಹಲಿಯ ಎಎಪಿ ಸರ್ಕಾರವು ಒದಗಿಸುವ ಉಚಿತ ತೀರ್ಥಯಾತ್ರೆಯ ಸೇವೆಯನ್ನು ರಾಜ್ಯದ ಜನರಿಗೂ ಒದಗಿಸಲಾಗುವುದು” ಎಂದು ಘೋಷಿಸಿದರು.

ಸೆಪ್ಟೆಂಬರ್‌ನಲ್ಲಿ ನೈನಿತಾಲ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, “ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯಲ್ಲೂ ಉದ್ಯೋಗ ಸೃಷ್ಟಿಸಲಾಗುವುದು, ನಿರುದ್ಯೋಗಿ ಯುವಕರಿಗೆ 5000 ರೂ. ಸ್ಟೈಫಂಡ್ ನೀಡಲಾಗುವುದು” ಎಂದು ಘೋಷಿಸಿದ್ದರು. ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ 1 ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದ್ದರು.

ಆಗಸ್ಟ್ 17ರಂದು ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಜಗತ್ತಿನಾದ್ಯಂತ ಇರುವ ಹಿಂದೂಗಳಿಗಾಗಿ ಉತ್ತರಾಖಂಡ್‌ ರಾಜ್ಯವನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡಲಾಗುವುದು” ಎಂದು ಕೇಜ್ರಿವಾಲ್ ಘೋಷಿಸಿದ್ದರು. ಜುಲೈ 11ರಂದು, ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಆಪ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು” ಎಂದಿದ್ದರು.


ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...