Homeಮುಖಪುಟಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

ಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

- Advertisement -
- Advertisement -

“ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 1,000 ರೂ. ಠೇವಣಿ ಇಡಲಾಡಲಾಗುವುದು” ಎಂದು ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಕುಮಾನ್‌ನ ಯುಎಸ್ ನಗರದ ಕಾಶಿಪುರ ಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ. ಯುಎಸ್ ನಗರವು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ತವರು ಜಿಲ್ಲೆಯಾಗಿದೆ.

ಕೇಜ್ರಿವಾಲ್ ಮಾತನಾಡಿ, “ಹಣ ಎಲ್ಲಿಂದ ಬರುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ಉತ್ತರಾಖಾಂಡ್‌‌ ಬಜೆಟ್ ಗಾತ್ರ ಸುಮಾರು 55,000 ಕೋಟಿ ರೂ.. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲವೇ? ಯಾವುದೇ ಕಾಮಗಾರಿಯಾದರೂ ಎಷ್ಟು ಭ್ರಷ್ಟಾಚಾರ ರಾಜ್ಯದಲ್ಲಿದೆ? ರಾಜ್ಯದಲ್ಲಿ ಶೇ.60, ಶೇ.80ರಷ್ಟು ಭ್ರಷ್ಟಾಚಾರ ಇದೆ ಎನ್ನುತ್ತಾರೆ ಕೆಲವರು. ಶೇ. 20ರಷ್ಟು ಭ್ರಷ್ಟಾಚಾರವಿದೆ ಎಂದು ಹೇಳೋಣ. ಹೀಗಾಗಿ 55,000 ಕೋಟಿ ರೂ.ಗಳಲ್ಲಿ ಶೇ. 20 ಅಂದರೆ 11,000 ಕೋಟಿ ರೂ.ಗಳಾಗುತ್ತದೆ. ಇಷ್ಟು ಹಣ ರಾಜಕಾರಣಿಗಳ ಜೇಬಿಗೆ, ಸ್ವಿಸ್ ಬ್ಯಾಂಕ್‌ಗೆ ಹೋಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಮಹಿಳೆಯರಿಗೆ ಮಾಸಿಕವಾಗಿ ಒಂದು ಸಾವಿರ ರೂ. ನೀಡುವುದಾದರೆ 3,000 ಕೋಟಿ ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಬೇಕಾಗುತ್ತದೆ ಎಂದು ಹೇಳಿರುವ ಕೇಜ್ರಿವಾಲ್‌, “ಸ್ವಿಸ್ ಬ್ಯಾಂಕ್‌ಗಳಿಗೆ ಹೋಗುತ್ತಿರುವ ಹಣವನ್ನು ನಾನು ನಿಲ್ಲಿಸುತ್ತೇನೆ. ಹಾಗಾಗಿ ಸ್ವಿಸ್ ಬ್ಯಾಂಕ್ ಗಳಿಗೆ ಹೋಗುವ ಹಣ ಇಲ್ಲಿನ ಮಹಿಳೆಯರ ಜೇಬಿಗೆ ಸೇರುತ್ತದೆ” ಎಂದು ಭರವಸೆ ನೀಡಿದ್ದಾರೆ.

ಈ ವರ್ಷ ಕೇಜ್ರಿವಾಲ್ ಅವರು ಉತ್ತರಾಖಾಂಡ್‌ ರಾಜ್ಯಕ್ಕೆ ಐದನೇ ಬಾರಿಗೆ ಭೇಟಿ ನೀಡಿದ್ದಾರೆ. ನವೆಂಬರ್ 21ರಂದು ಹರಿದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, “ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ, ದೆಹಲಿಯ ಎಎಪಿ ಸರ್ಕಾರವು ಒದಗಿಸುವ ಉಚಿತ ತೀರ್ಥಯಾತ್ರೆಯ ಸೇವೆಯನ್ನು ರಾಜ್ಯದ ಜನರಿಗೂ ಒದಗಿಸಲಾಗುವುದು” ಎಂದು ಘೋಷಿಸಿದರು.

ಸೆಪ್ಟೆಂಬರ್‌ನಲ್ಲಿ ನೈನಿತಾಲ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, “ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯಲ್ಲೂ ಉದ್ಯೋಗ ಸೃಷ್ಟಿಸಲಾಗುವುದು, ನಿರುದ್ಯೋಗಿ ಯುವಕರಿಗೆ 5000 ರೂ. ಸ್ಟೈಫಂಡ್ ನೀಡಲಾಗುವುದು” ಎಂದು ಘೋಷಿಸಿದ್ದರು. ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ 1 ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದ್ದರು.

ಆಗಸ್ಟ್ 17ರಂದು ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಜಗತ್ತಿನಾದ್ಯಂತ ಇರುವ ಹಿಂದೂಗಳಿಗಾಗಿ ಉತ್ತರಾಖಂಡ್‌ ರಾಜ್ಯವನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡಲಾಗುವುದು” ಎಂದು ಕೇಜ್ರಿವಾಲ್ ಘೋಷಿಸಿದ್ದರು. ಜುಲೈ 11ರಂದು, ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಆಪ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು” ಎಂದಿದ್ದರು.


ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...