Homeಮುಖಪುಟಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

ಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

- Advertisement -
- Advertisement -

“ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 1,000 ರೂ. ಠೇವಣಿ ಇಡಲಾಡಲಾಗುವುದು” ಎಂದು ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಕುಮಾನ್‌ನ ಯುಎಸ್ ನಗರದ ಕಾಶಿಪುರ ಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ. ಯುಎಸ್ ನಗರವು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ತವರು ಜಿಲ್ಲೆಯಾಗಿದೆ.

ಕೇಜ್ರಿವಾಲ್ ಮಾತನಾಡಿ, “ಹಣ ಎಲ್ಲಿಂದ ಬರುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ಉತ್ತರಾಖಾಂಡ್‌‌ ಬಜೆಟ್ ಗಾತ್ರ ಸುಮಾರು 55,000 ಕೋಟಿ ರೂ.. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲವೇ? ಯಾವುದೇ ಕಾಮಗಾರಿಯಾದರೂ ಎಷ್ಟು ಭ್ರಷ್ಟಾಚಾರ ರಾಜ್ಯದಲ್ಲಿದೆ? ರಾಜ್ಯದಲ್ಲಿ ಶೇ.60, ಶೇ.80ರಷ್ಟು ಭ್ರಷ್ಟಾಚಾರ ಇದೆ ಎನ್ನುತ್ತಾರೆ ಕೆಲವರು. ಶೇ. 20ರಷ್ಟು ಭ್ರಷ್ಟಾಚಾರವಿದೆ ಎಂದು ಹೇಳೋಣ. ಹೀಗಾಗಿ 55,000 ಕೋಟಿ ರೂ.ಗಳಲ್ಲಿ ಶೇ. 20 ಅಂದರೆ 11,000 ಕೋಟಿ ರೂ.ಗಳಾಗುತ್ತದೆ. ಇಷ್ಟು ಹಣ ರಾಜಕಾರಣಿಗಳ ಜೇಬಿಗೆ, ಸ್ವಿಸ್ ಬ್ಯಾಂಕ್‌ಗೆ ಹೋಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಮಹಿಳೆಯರಿಗೆ ಮಾಸಿಕವಾಗಿ ಒಂದು ಸಾವಿರ ರೂ. ನೀಡುವುದಾದರೆ 3,000 ಕೋಟಿ ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಬೇಕಾಗುತ್ತದೆ ಎಂದು ಹೇಳಿರುವ ಕೇಜ್ರಿವಾಲ್‌, “ಸ್ವಿಸ್ ಬ್ಯಾಂಕ್‌ಗಳಿಗೆ ಹೋಗುತ್ತಿರುವ ಹಣವನ್ನು ನಾನು ನಿಲ್ಲಿಸುತ್ತೇನೆ. ಹಾಗಾಗಿ ಸ್ವಿಸ್ ಬ್ಯಾಂಕ್ ಗಳಿಗೆ ಹೋಗುವ ಹಣ ಇಲ್ಲಿನ ಮಹಿಳೆಯರ ಜೇಬಿಗೆ ಸೇರುತ್ತದೆ” ಎಂದು ಭರವಸೆ ನೀಡಿದ್ದಾರೆ.

ಈ ವರ್ಷ ಕೇಜ್ರಿವಾಲ್ ಅವರು ಉತ್ತರಾಖಾಂಡ್‌ ರಾಜ್ಯಕ್ಕೆ ಐದನೇ ಬಾರಿಗೆ ಭೇಟಿ ನೀಡಿದ್ದಾರೆ. ನವೆಂಬರ್ 21ರಂದು ಹರಿದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, “ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ, ದೆಹಲಿಯ ಎಎಪಿ ಸರ್ಕಾರವು ಒದಗಿಸುವ ಉಚಿತ ತೀರ್ಥಯಾತ್ರೆಯ ಸೇವೆಯನ್ನು ರಾಜ್ಯದ ಜನರಿಗೂ ಒದಗಿಸಲಾಗುವುದು” ಎಂದು ಘೋಷಿಸಿದರು.

ಸೆಪ್ಟೆಂಬರ್‌ನಲ್ಲಿ ನೈನಿತಾಲ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, “ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯಲ್ಲೂ ಉದ್ಯೋಗ ಸೃಷ್ಟಿಸಲಾಗುವುದು, ನಿರುದ್ಯೋಗಿ ಯುವಕರಿಗೆ 5000 ರೂ. ಸ್ಟೈಫಂಡ್ ನೀಡಲಾಗುವುದು” ಎಂದು ಘೋಷಿಸಿದ್ದರು. ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ 1 ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದ್ದರು.

ಆಗಸ್ಟ್ 17ರಂದು ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಜಗತ್ತಿನಾದ್ಯಂತ ಇರುವ ಹಿಂದೂಗಳಿಗಾಗಿ ಉತ್ತರಾಖಂಡ್‌ ರಾಜ್ಯವನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡಲಾಗುವುದು” ಎಂದು ಕೇಜ್ರಿವಾಲ್ ಘೋಷಿಸಿದ್ದರು. ಜುಲೈ 11ರಂದು, ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಆಪ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು” ಎಂದಿದ್ದರು.


ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...