Homeಮುಖಪುಟಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

ಉತ್ತರಾಖಾಂಡ್‌‌ನಲ್ಲಿ ಎಎಪಿ ಗೆದ್ದರೆ ಪ್ರತಿ ಮಹಿಳೆಗೆ ಮಾಸಿಕ 1,000 ರೂ.: ಕೇಜ್ರಿವಾಲ್

- Advertisement -
- Advertisement -

“ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 1,000 ರೂ. ಠೇವಣಿ ಇಡಲಾಡಲಾಗುವುದು” ಎಂದು ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಕುಮಾನ್‌ನ ಯುಎಸ್ ನಗರದ ಕಾಶಿಪುರ ಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ. ಯುಎಸ್ ನಗರವು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ತವರು ಜಿಲ್ಲೆಯಾಗಿದೆ.

ಕೇಜ್ರಿವಾಲ್ ಮಾತನಾಡಿ, “ಹಣ ಎಲ್ಲಿಂದ ಬರುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ಉತ್ತರಾಖಾಂಡ್‌‌ ಬಜೆಟ್ ಗಾತ್ರ ಸುಮಾರು 55,000 ಕೋಟಿ ರೂ.. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲವೇ? ಯಾವುದೇ ಕಾಮಗಾರಿಯಾದರೂ ಎಷ್ಟು ಭ್ರಷ್ಟಾಚಾರ ರಾಜ್ಯದಲ್ಲಿದೆ? ರಾಜ್ಯದಲ್ಲಿ ಶೇ.60, ಶೇ.80ರಷ್ಟು ಭ್ರಷ್ಟಾಚಾರ ಇದೆ ಎನ್ನುತ್ತಾರೆ ಕೆಲವರು. ಶೇ. 20ರಷ್ಟು ಭ್ರಷ್ಟಾಚಾರವಿದೆ ಎಂದು ಹೇಳೋಣ. ಹೀಗಾಗಿ 55,000 ಕೋಟಿ ರೂ.ಗಳಲ್ಲಿ ಶೇ. 20 ಅಂದರೆ 11,000 ಕೋಟಿ ರೂ.ಗಳಾಗುತ್ತದೆ. ಇಷ್ಟು ಹಣ ರಾಜಕಾರಣಿಗಳ ಜೇಬಿಗೆ, ಸ್ವಿಸ್ ಬ್ಯಾಂಕ್‌ಗೆ ಹೋಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಮಹಿಳೆಯರಿಗೆ ಮಾಸಿಕವಾಗಿ ಒಂದು ಸಾವಿರ ರೂ. ನೀಡುವುದಾದರೆ 3,000 ಕೋಟಿ ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಬೇಕಾಗುತ್ತದೆ ಎಂದು ಹೇಳಿರುವ ಕೇಜ್ರಿವಾಲ್‌, “ಸ್ವಿಸ್ ಬ್ಯಾಂಕ್‌ಗಳಿಗೆ ಹೋಗುತ್ತಿರುವ ಹಣವನ್ನು ನಾನು ನಿಲ್ಲಿಸುತ್ತೇನೆ. ಹಾಗಾಗಿ ಸ್ವಿಸ್ ಬ್ಯಾಂಕ್ ಗಳಿಗೆ ಹೋಗುವ ಹಣ ಇಲ್ಲಿನ ಮಹಿಳೆಯರ ಜೇಬಿಗೆ ಸೇರುತ್ತದೆ” ಎಂದು ಭರವಸೆ ನೀಡಿದ್ದಾರೆ.

ಈ ವರ್ಷ ಕೇಜ್ರಿವಾಲ್ ಅವರು ಉತ್ತರಾಖಾಂಡ್‌ ರಾಜ್ಯಕ್ಕೆ ಐದನೇ ಬಾರಿಗೆ ಭೇಟಿ ನೀಡಿದ್ದಾರೆ. ನವೆಂಬರ್ 21ರಂದು ಹರಿದ್ವಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, “ಉತ್ತರಾಖಂಡದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ, ದೆಹಲಿಯ ಎಎಪಿ ಸರ್ಕಾರವು ಒದಗಿಸುವ ಉಚಿತ ತೀರ್ಥಯಾತ್ರೆಯ ಸೇವೆಯನ್ನು ರಾಜ್ಯದ ಜನರಿಗೂ ಒದಗಿಸಲಾಗುವುದು” ಎಂದು ಘೋಷಿಸಿದರು.

ಸೆಪ್ಟೆಂಬರ್‌ನಲ್ಲಿ ನೈನಿತಾಲ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ, “ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯಲ್ಲೂ ಉದ್ಯೋಗ ಸೃಷ್ಟಿಸಲಾಗುವುದು, ನಿರುದ್ಯೋಗಿ ಯುವಕರಿಗೆ 5000 ರೂ. ಸ್ಟೈಫಂಡ್ ನೀಡಲಾಗುವುದು” ಎಂದು ಘೋಷಿಸಿದ್ದರು. ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ 1 ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದ್ದರು.

ಆಗಸ್ಟ್ 17ರಂದು ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಜಗತ್ತಿನಾದ್ಯಂತ ಇರುವ ಹಿಂದೂಗಳಿಗಾಗಿ ಉತ್ತರಾಖಂಡ್‌ ರಾಜ್ಯವನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಮಾಡಲಾಗುವುದು” ಎಂದು ಕೇಜ್ರಿವಾಲ್ ಘೋಷಿಸಿದ್ದರು. ಜುಲೈ 11ರಂದು, ಕೇಜ್ರಿವಾಲ್ ರಾಜ್ಯಕ್ಕೆ ಭೇಟಿ ನೀಡಿದಾಗ, “ಆಪ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು” ಎಂದಿದ್ದರು.


ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪೂರ್ವಯೋಜಿತವಾದುದು: SIT

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...