Homeಮುಖಪುಟಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

- Advertisement -
- Advertisement -

‘ಗೆಲ್ಲಲು ನನಗೆ ಸಹಾಯ ಮಾಡಿ, 2022 ಕತಾರ್ ಫಿಫಾ ವಿಶ್ವಕಪ್‌ಗೆ ಟಿಕೆಟ್ ಪಡೆಯಿರಿ’ ಇದು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಯೊಬ್ಬರ ಪ್ರಣಾಳಿಕೆ. ರಾಜ್ಯದ ಕುಂಡೊಟ್ಟಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಡಪಕ್ಷ ಬೆಂಬಲಿತ ಪಕ್ಷೇತರ ಅಭ್ಯರ್ಥಿ‌ ಕಟ್ಟಪ್ಪುರುತಿ ಸುಲೈಮಾನ್‌ ಹಾಜಿ ಅವರು ಮೇಲಿನ ಭರವಸೆಯನ್ನು ಯುವಕರಿಗೆ ನೀಡಿದ್ದಾರೆ.

ಕೇರಳದಲ್ಲಿ ಫುಟ್ಬಾಲ್ ಜನಪ್ರಿಯ ಕ್ರೀಡೆಯಾಗಿದೆ. ಯುವಕರನ್ನು ಸೆಳೆಯುವ ಉದ್ದೇಶದಿಂದ ಸುಲೈಮಾನ್‌ ಹಾಜಿ ಈ ಭರವಸೆ ನೀಡಿದ್ದಾರೆ.

“ಒಂದು ವೇಳೆ ನಾನು ಚುನಾಯಿತರಾದರೆ, ‘ಶಾಸಕ ಟ್ರೋಫಿ’ ಪಂದ್ಯಾವಳಿಯನ್ನು ನಡೆಸುತ್ತೇನೆ. ಈ ಪಂದ್ಯಾವಳಿಯಲ್ಲಿ ಕ್ಷೇತ್ರದ ವ್ಯಾಪ್ತಿಗೆ ಬರುವ ಆರು ಪಂಚಾಯಿತಿಗಳು ಮತ್ತು ಒಂದು ಪುರಸಭೆಯಲ್ಲಿನ ಫುಟ್ಬಾಲ್ ಕ್ಲಬ್‌ಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ. ವಿಜೇತ 11 ಸದಸ್ಯರ ತಂಡವು 2022 ರ ಫಿಫಾ ವಿಶ್ವಕಪ್‌ನಲ್ಲಿ ಕತಾರ್‌ಗೆ ತೆರಳಲು ಮತ್ತು ಪಂದ್ಯವನ್ನು ವೀಕ್ಷಿಸಲು ಅವಕಾಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಈ ಪ್ರವಾಸದ ಎಲ್ಲಾ ವೆಚ್ಚವನ್ನು ಭರಿಸುವುದಾಗಿ ಸುಲೈಮಾನ್‌ ಹಾಜಿ ಹೇಳಿದ್ದಾರೆ. ಅವರು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ, ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಕ್ಷೇತ್ರದಲ್ಲಿ ಮಿನಿ ಸಿವಿಲ್ ಸ್ಟೇಷನ್ ಸ್ಥಾಪಿಸುವುದಾಗಿ ಹೇಳಿದ್ದಾರೆ.

ತರಕಾರಿ ಮಾರುಕಟ್ಟೆ, ಹೈಟೆಕ್ ಆಸ್ಪತ್ರೆಗಳು, ಕ್ಯಾನ್ಸರ್ ಮತ್ತು ಡಯಾಲಿಸಿಸ್ ಕೇಂದ್ರಗಳು, ಕ್ರೀಡಾಂಗಣಗಳು ಮತ್ತು ಮಕ್ಕಳ ಉದ್ಯಾನವನಗಳನ್ನು ನಿರ್ಮಿಸುವುದಾಗಿ ಅವರು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. “ನಾನು ಕೊಂಡೊಟ್ಟಿಯ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇನೆ. ರಸ್ತೆ ಸ್ಥಿತಿ ಮತ್ತು ಕುಡಿಯುವ ನೀರಿನ ಲಭ್ಯತೆಯಂತಹ ಸಮಸ್ಯೆಗಳನ್ನು ಸಹ ಪರಿಹರಿಸಲಾಗುವುದು ”ಎಂದು ಅವರು ಹೇಳಿದ್ದಾರೆ.

ಸುಲೈಮಾನ್‌ ಹಾಜಿ ಅವರ ಪ್ರಣಾಳಿಕೆಯ ಹೊರತಾಗಿಯು ಕುಂಡೊಟ್ಟಿ ಮುಸ್ಲಿಂ ಲೀಗ್‌ ಭದ್ರಕೋಟೆಯಾಗಿದ್ದು, ಅವರು ಗೆಲ್ಲುವುದು ಕಠಿಣ ಕಾರ್ಯವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲಿ ಪ್ರಸ್ತುತ ಶಾಸಕರಾಗಿರುವ ಟಿ.ವಿ. ಇಬ್ರಾಹಿಂ ಮತ್ತೇ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಕೆಲವು ವಾರಗಳ ಹಿಂದೆಯೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕೂಡ ಕ್ಷೇತ್ರದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸುವುದು ಸೇರಿದಂತೆ ಹಲವು ವಿಷಯಗಳನ್ನು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...