Homeಮುಖಪುಟಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

ಕೇರಳದ ಈ ಅಭ್ಯರ್ಥಿ ಗೆದ್ದರೆ ‘ವಿಶ್ವಕಪ್‌ ಫುಟ್ಬಾಲ್‌’ ನೋಡಲು ಕರೆದೊಯ್ಯುತ್ತಾರೆ!

- Advertisement -
- Advertisement -

‘ಗೆಲ್ಲಲು ನನಗೆ ಸಹಾಯ ಮಾಡಿ, 2022 ಕತಾರ್ ಫಿಫಾ ವಿಶ್ವಕಪ್‌ಗೆ ಟಿಕೆಟ್ ಪಡೆಯಿರಿ’ ಇದು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಯೊಬ್ಬರ ಪ್ರಣಾಳಿಕೆ. ರಾಜ್ಯದ ಕುಂಡೊಟ್ಟಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಡಪಕ್ಷ ಬೆಂಬಲಿತ ಪಕ್ಷೇತರ ಅಭ್ಯರ್ಥಿ‌ ಕಟ್ಟಪ್ಪುರುತಿ ಸುಲೈಮಾನ್‌ ಹಾಜಿ ಅವರು ಮೇಲಿನ ಭರವಸೆಯನ್ನು ಯುವಕರಿಗೆ ನೀಡಿದ್ದಾರೆ.

ಕೇರಳದಲ್ಲಿ ಫುಟ್ಬಾಲ್ ಜನಪ್ರಿಯ ಕ್ರೀಡೆಯಾಗಿದೆ. ಯುವಕರನ್ನು ಸೆಳೆಯುವ ಉದ್ದೇಶದಿಂದ ಸುಲೈಮಾನ್‌ ಹಾಜಿ ಈ ಭರವಸೆ ನೀಡಿದ್ದಾರೆ.

“ಒಂದು ವೇಳೆ ನಾನು ಚುನಾಯಿತರಾದರೆ, ‘ಶಾಸಕ ಟ್ರೋಫಿ’ ಪಂದ್ಯಾವಳಿಯನ್ನು ನಡೆಸುತ್ತೇನೆ. ಈ ಪಂದ್ಯಾವಳಿಯಲ್ಲಿ ಕ್ಷೇತ್ರದ ವ್ಯಾಪ್ತಿಗೆ ಬರುವ ಆರು ಪಂಚಾಯಿತಿಗಳು ಮತ್ತು ಒಂದು ಪುರಸಭೆಯಲ್ಲಿನ ಫುಟ್ಬಾಲ್ ಕ್ಲಬ್‌ಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ. ವಿಜೇತ 11 ಸದಸ್ಯರ ತಂಡವು 2022 ರ ಫಿಫಾ ವಿಶ್ವಕಪ್‌ನಲ್ಲಿ ಕತಾರ್‌ಗೆ ತೆರಳಲು ಮತ್ತು ಪಂದ್ಯವನ್ನು ವೀಕ್ಷಿಸಲು ಅವಕಾಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಈ ಪ್ರವಾಸದ ಎಲ್ಲಾ ವೆಚ್ಚವನ್ನು ಭರಿಸುವುದಾಗಿ ಸುಲೈಮಾನ್‌ ಹಾಜಿ ಹೇಳಿದ್ದಾರೆ. ಅವರು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ, ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಕ್ಷೇತ್ರದಲ್ಲಿ ಮಿನಿ ಸಿವಿಲ್ ಸ್ಟೇಷನ್ ಸ್ಥಾಪಿಸುವುದಾಗಿ ಹೇಳಿದ್ದಾರೆ.

ತರಕಾರಿ ಮಾರುಕಟ್ಟೆ, ಹೈಟೆಕ್ ಆಸ್ಪತ್ರೆಗಳು, ಕ್ಯಾನ್ಸರ್ ಮತ್ತು ಡಯಾಲಿಸಿಸ್ ಕೇಂದ್ರಗಳು, ಕ್ರೀಡಾಂಗಣಗಳು ಮತ್ತು ಮಕ್ಕಳ ಉದ್ಯಾನವನಗಳನ್ನು ನಿರ್ಮಿಸುವುದಾಗಿ ಅವರು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. “ನಾನು ಕೊಂಡೊಟ್ಟಿಯ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇನೆ. ರಸ್ತೆ ಸ್ಥಿತಿ ಮತ್ತು ಕುಡಿಯುವ ನೀರಿನ ಲಭ್ಯತೆಯಂತಹ ಸಮಸ್ಯೆಗಳನ್ನು ಸಹ ಪರಿಹರಿಸಲಾಗುವುದು ”ಎಂದು ಅವರು ಹೇಳಿದ್ದಾರೆ.

ಸುಲೈಮಾನ್‌ ಹಾಜಿ ಅವರ ಪ್ರಣಾಳಿಕೆಯ ಹೊರತಾಗಿಯು ಕುಂಡೊಟ್ಟಿ ಮುಸ್ಲಿಂ ಲೀಗ್‌ ಭದ್ರಕೋಟೆಯಾಗಿದ್ದು, ಅವರು ಗೆಲ್ಲುವುದು ಕಠಿಣ ಕಾರ್ಯವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲಿ ಪ್ರಸ್ತುತ ಶಾಸಕರಾಗಿರುವ ಟಿ.ವಿ. ಇಬ್ರಾಹಿಂ ಮತ್ತೇ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಕೆಲವು ವಾರಗಳ ಹಿಂದೆಯೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಕೂಡ ಕ್ಷೇತ್ರದಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಸುವುದು ಸೇರಿದಂತೆ ಹಲವು ವಿಷಯಗಳನ್ನು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...