Homeಕರೋನಾ ತಲ್ಲಣಕೇಂದ್ರ ಸಹಕರಿಸಿದರೆ ಮೂರು ತಿಂಗಳಲ್ಲಿ ಸಂಪೂರ್ಣ ದೆಹಲಿಗೆ ಲಸಿಕೆ: ಕೇಜ್ರಿವಾಲ್

ಕೇಂದ್ರ ಸಹಕರಿಸಿದರೆ ಮೂರು ತಿಂಗಳಲ್ಲಿ ಸಂಪೂರ್ಣ ದೆಹಲಿಗೆ ಲಸಿಕೆ: ಕೇಜ್ರಿವಾಲ್

- Advertisement -
- Advertisement -

ಕೇಂದ್ರ ಸರ್ಕಾರವು ನಮಗೆ ತಿಂಗಳಿಗೆ 80-85 ಲಕ್ಷ ಡೋಸೆಜ್ ಲಸಿಕೆ ಒದಗಿಸಿದ್ದಲ್ಲಿ ಕೇವಲ ಮೂರು ತಿಂಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ದೆಹಲಿವಾಸಿಗಳಿಗೆ ಲಸಿಕೆ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಇದುವರೆಗೂ ನಮಗೆ ಕೇವಲ 40 ಲಕ್ಷ ಡೋಸೆಜ್ ಮಾತ್ರ ಲಸಿಕೆ ನೀಡಲಾಗಿದೆ. ಈಗ ಪ್ರತಿದಿನ 1 ಲಕ್ಷ ಜನರಿಗೆ ಮಾತ್ರ ಲಸಿಕೆ ನೀಡಲು ಸಾಧ್ಯವಾಗುತ್ತಿದೆ. ಅದನ್ನು ನಾವು ದಿನಕ್ಕೆ 3 ಲಕ್ಷ ಜನರಿಗೆ ನೀಡುವ ಗುರಿ ಇಟ್ಟುಕೊಂಡಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಅಗತ್ಯವಿರುವಷ್ಟು ಲಸಿಕೆ ಒದಗಿಸಿಲ್ಲ. ಅಲ್ಲದೆ ದೆಹಲಿಯ ಅಕ್ಕಪಕ್ಕದ ನಗರಗಳಾದ ಫರಿದಾಬಾದ್, ಗಾಜಿಯಾಬಾದ್, ಸೋನಿಪತ್, ಗುರ್ಗಾವ್, ನೋಯ್ಡಾಗಳಿಂದಲೂ ಜನ ಲಸಿಕೆಗಾಗಿ ದೆಹಲಿಗೆ ಬರುತ್ತಿದ್ದಾರೆ. ಇಂತಹ ಸಮಯದಲ್ಲಿ ನಾವು ಕೇಳಿದಷ್ಟು ಲಸಿಕೆ ನೀಡಿದರೆ ಉಪಯೋಗವಾಗುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟರು 1.5 ಕೋಟಿ ಜನರಿದ್ದಾರೆ. ಅಂದರೆ ನಮಗೆ 3 ಕೋಟಿ ಡೋಸೆಜ್ ಲಸಿಕೆ ಬೇಕು. ಈಗ 40 ಲಕ್ಷ ಡೋಸೆಜ್ ಬಂದಿದೆ. ಪ್ರತಿ ತಿಂಗಳು 80-85 ಲಕ್ಷ ಡೋಸೆಜ್ ಲಸಿಕೆ ಒದಗಿಸಿದ್ದಲ್ಲಿ ಮೂರು ತಿಂಗಳಲ್ಲಿ ಪ್ರತಿಯೊಬ್ಬ ದೆಹಲಿವಾಸಿಗಳಿಗೂ ಲಸಿಕೆ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈಗ ಸದ್ಯಕ್ಕೆ ನಾವು 100 ಶಾಲೆಗಳಲ್ಲಿ ಲಸಿಕೆ ನೀಡುತ್ತಿದ್ದೇವೆ. ಅಗತ್ಯವಿರುವಷ್ಟು ಲಸಿಕೆ ಸಿಕ್ಕ ಕೂಡಲೇ 300 ಶಾಲೆಗಳಲ್ಲಿ ಲಸಿಕೆ ಅಭಿಯಾನ ಆರಂಭಿಸುತ್ತೇವೆ ಎಂದಿದ್ದಾರೆ.

ಕೋವಿಡ್ 3 ನೇ ಅಲೆ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಾರೆ. ಹಾಗಾಗಿ ಅಷ್ಟರೊಳಗಾಗಿ ನಾವು ಎಲ್ಲರಿಗೂ ಲಸಿಕೆ ನೀಡಬೇಕಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇನ್ನೊಂದೆಡೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯದಲ್ಲಿ ಕೋವಿಡ್ ಲಸಿಕೆಗಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಆಗಾಗ್ಗೆ ತೊಂದರೆಗಳಾಗುವ ದೂರುಗಳು ಬಂದ ಹಿನ್ನೆಲೆಯಲ್ಲಿ ಅವರು ಈ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆ ಸಮಸ್ಯೆಯನ್ನು ಮುಂಬೈ ಯಶಸ್ವಿಯಾಗಿ ನಿಭಾಯಿಸಿದ್ದು ಹೇಗೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...