Homeಮುಖಪುಟಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ನ್ಯಾಯ್ ಯೋಜನೆಯಂತೆ ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ ಎನ್ನಲಾಗಿದೆ.

- Advertisement -
- Advertisement -

ನೀವು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ತಂದರೆ ಪ್ರಸ್ತಾವಿತ ಕನಿಷ್ಠ ಆದಾಯ ಖಾತರಿ ಯೋಜನೆ- ‘NYAY’ (ನ್ಯಾಯುತ್ತಮ್ ಆಯ್ ಯೋಜನಾ) ಅನ್ನು ಕೇರಳ ರಾಜ್ಯದಲ್ಲಿ ಪ್ರಯೋಗಕ್ಕೆ ತರಲಾಗುವುದು ಎಂದು ಮಂಗಳವಾರ ರಾಹುಲ್ ಗಾಂಧಿ ಭರವಸೆ ನೀಡಿದರು.

ಕಳೆದ 50 ವರ್ಷಗಳಿಂದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಪ್ರತಿನಿಧಿಸುವ ಪುತ್ತುಪಲ್ಲಿ ವಿಧಾನಸಭಾ ಕ್ಷೇತ್ರದ ಮನಾರ್‌ಕಾಡ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದನ್ನು ಪರೀಕ್ಷಿಸಲು ನನಗೆ ಸ್ವಾರ್ಥ ಕಾರಣವಿದೆ ಎಂದಿದ್ದಾರೆ.

ಚಾಂಡಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ತೆರೆದ ಪ್ರಚಾರ ವಾಹನದಲ್ಲಿ ಮಾತನಾಡಿದ ಅವರು, ಯೋಜನೆಯ ಯಶಸ್ಸಿನ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದರು

“ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ. ಮತ್ತು ಮುಂದೆ ಏನಾಗಲಿದೆ ಎಂದು ನಮಗೆ ತಿಳಿದಿದೆ. ನಾವು ಕೇರಳದಲ್ಲಿ ಹೊಸ ಆಲೋಚನೆಯನ್ನು ಪರೀಕ್ಷಿಸುತ್ತಿದ್ದೇವೆ” ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಚಾರವನ್ನು ರೂಪಿಸಿದ ಗಾಂಧಿ, ಬಡತನದ ಮೇಲಿನ ಅಂತಿಮ ದಾಳಿಯ ಆರಂಭವನ್ನು ಸೂಚಿಸುವ ಈ ಯೋಜನೆಯನ್ನು ಅಪ್ರತಿಮ (ಗ್ರೌಂಡ್ ಬ್ರೇಕಿಂಗ್) ಎಂದು ಬಣ್ಣಿಸಿದ್ದರು.

ಆದರೆ, ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ‘ನ್ಯಾಯ್’ ಭರವಸೆಯನ್ನು ಎತ್ತಿ ತೋರಿಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ವಿಫಲವಾಗಿತ್ತು.

ಈ ಯೋಜನೆಯನ್ನು ಕೇರಳದಲ್ಲಿ “ಪರೀಕ್ಷಿಸಲು” ಬಯಸಿದ್ದೇನೆ. ಅದು ಕೇರಳದಲ್ಲಿ ಸರಿಯಾಗಿ ಸ್ವೀಕಾರಾರ್ಹವಾದರೆ, ದೇಶದ ಎಲ್ಲಾ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿಯೂ ಅದನ್ನು ಪುನರಾವರ್ತಿಸಲು ಬಯಸುತ್ತೇನೆ ಎಂದು ರಾಹುಲ್ ಹೇಳಿದರು.

“ಇದು ಸಂಭವಿಸಿದರೆ, ಕೇರಳವು ಬಡತನದ ವಿರುದ್ಧ ಹೇಗೆ ಹೋರಾಡಬೇಕು ಎಂಬುದರ ಕುರಿತು ಭಾರತದ ಉಳಿದ ಭಾಗಗಳಿಗೆ ತೋರಿಸಲಿದೆ” ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಇಲ್ಲಿನ ಪರುತುಂಪಾರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, “ನಾವು ಹಲವಾರು ದಿನಗಳಲ್ಲಿ ಸರ್ಕಾರ ರಚಿಸಿದಾಗ ಮೊದಲಿಗೆ ನ್ಯಾಯ್ ಯೋಜನೆಯನ್ನು ಆರಂಭಿಸಲಿದ್ದೇವೆ’ ಎಂದು ಹೇಳಿದರು. ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆಯೂ ನ್ಯಾಯ್ ಯೋಜನೆಗೆ ಅವರು ನೀಡುವ ಮಹತ್ವವನ್ನು ಒತ್ತಿಹೇಳಿದ್ದರು.

‘ಇದನ್ನೇನೂ ಒಂದು ರೀತಿಯ ದಾನಧರ್ಮವಾಗಿ ಮಾಡಲು ಹೋಗುವುದಿಲ್ಲ. ಇದು ದಾನವಲ್ಲ. ನಾವು ನಿಮಗೆ ನ್ಯಾಯಯುತವಾಗಿ ನ್ಯಾಯ್ ಮೂಲಕ ಹಣವನ್ನು ನೀಡುತ್ತಿದ್ದೇವೆ.. ನಾವು ಹಣವನ್ನು ನಿಮ್ಮ ಜೇಬಿನಲ್ಲಿ ಇಡುತ್ತಿದ್ದೇವೆ. ಆದ್ದರಿಂದ ನೀವು ಹಣವನ್ನು ಖರ್ಚು ಮಾಡಬಹುದು’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೋಟು ಅಮಾನ್ಯೀಕರಣ, ಅವರ ದೋಷಪೂರಿತ ಜಿಎಸ್‌ಟಿ ಅನುಷ್ಠಾನ ಮತ್ತು ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ “ಕುಸಿದ” ಭಾರತೀಯ ಆರ್ಥಿಕತೆಯನ್ನು ಉನ್ನತೀಕರಿಸುವ ಏಕೈಕ ಮಾರ್ಗ ನ್ಯಾಯ್ ಆಗಿದೆ ಎಂದು ರಾಹುಲ್ ಹೇಳಿದ್ದಾರೆ.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೃಹಿಣಿಯರಿಗೆ 2000 ರೂ ‘ಪಿಂಚಣಿ’, ‘ನ್ಯಾಯ ಯೋಜನೆ’ ಅಡಿಯಲ್ಲಿ ಬಡವರಿಗೆ ವಾರ್ಷಿಕವಾಗಿ 72,000 ರೂ. ಮತ್ತು ದೀನದಲಿತರಿಗೆ ಐದು ಲಕ್ಷ ಮನೆಗಳ ನಿರ್ಮಾಣದ ಭರವಸೆ ನೀಡಿದೆ.


ಇದನ್ನೂ ಓದಿ: ರಾಹುಲ್‍ಗಾಂಧಿಯ `ನ್ಯಾಯ್’ ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...