Homeಮುಖಪುಟಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದರೆ ಕೇರಳದಲ್ಲಿ ‘NYAY’ ಪ್ರಯೋಗ: ರಾಹುಲ್ ಗಾಂಧಿ

ನ್ಯಾಯ್ ಯೋಜನೆಯಂತೆ ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ ಎನ್ನಲಾಗಿದೆ.

- Advertisement -
- Advertisement -

ನೀವು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ತಂದರೆ ಪ್ರಸ್ತಾವಿತ ಕನಿಷ್ಠ ಆದಾಯ ಖಾತರಿ ಯೋಜನೆ- ‘NYAY’ (ನ್ಯಾಯುತ್ತಮ್ ಆಯ್ ಯೋಜನಾ) ಅನ್ನು ಕೇರಳ ರಾಜ್ಯದಲ್ಲಿ ಪ್ರಯೋಗಕ್ಕೆ ತರಲಾಗುವುದು ಎಂದು ಮಂಗಳವಾರ ರಾಹುಲ್ ಗಾಂಧಿ ಭರವಸೆ ನೀಡಿದರು.

ಕಳೆದ 50 ವರ್ಷಗಳಿಂದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಪ್ರತಿನಿಧಿಸುವ ಪುತ್ತುಪಲ್ಲಿ ವಿಧಾನಸಭಾ ಕ್ಷೇತ್ರದ ಮನಾರ್‌ಕಾಡ್‌ನಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದನ್ನು ಪರೀಕ್ಷಿಸಲು ನನಗೆ ಸ್ವಾರ್ಥ ಕಾರಣವಿದೆ ಎಂದಿದ್ದಾರೆ.

ಚಾಂಡಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ತೆರೆದ ಪ್ರಚಾರ ವಾಹನದಲ್ಲಿ ಮಾತನಾಡಿದ ಅವರು, ಯೋಜನೆಯ ಯಶಸ್ಸಿನ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದರು

“ವರ್ಷಕ್ಕೆ 72,000 ರೂ. ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹೋಗುತ್ತದೆ. ಮತ್ತು ಮುಂದೆ ಏನಾಗಲಿದೆ ಎಂದು ನಮಗೆ ತಿಳಿದಿದೆ. ನಾವು ಕೇರಳದಲ್ಲಿ ಹೊಸ ಆಲೋಚನೆಯನ್ನು ಪರೀಕ್ಷಿಸುತ್ತಿದ್ದೇವೆ” ಹೇಳಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ವಿಚಾರವನ್ನು ರೂಪಿಸಿದ ಗಾಂಧಿ, ಬಡತನದ ಮೇಲಿನ ಅಂತಿಮ ದಾಳಿಯ ಆರಂಭವನ್ನು ಸೂಚಿಸುವ ಈ ಯೋಜನೆಯನ್ನು ಅಪ್ರತಿಮ (ಗ್ರೌಂಡ್ ಬ್ರೇಕಿಂಗ್) ಎಂದು ಬಣ್ಣಿಸಿದ್ದರು.

ಆದರೆ, ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ‘ನ್ಯಾಯ್’ ಭರವಸೆಯನ್ನು ಎತ್ತಿ ತೋರಿಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ವಿಫಲವಾಗಿತ್ತು.

ಈ ಯೋಜನೆಯನ್ನು ಕೇರಳದಲ್ಲಿ “ಪರೀಕ್ಷಿಸಲು” ಬಯಸಿದ್ದೇನೆ. ಅದು ಕೇರಳದಲ್ಲಿ ಸರಿಯಾಗಿ ಸ್ವೀಕಾರಾರ್ಹವಾದರೆ, ದೇಶದ ಎಲ್ಲಾ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿಯೂ ಅದನ್ನು ಪುನರಾವರ್ತಿಸಲು ಬಯಸುತ್ತೇನೆ ಎಂದು ರಾಹುಲ್ ಹೇಳಿದರು.

“ಇದು ಸಂಭವಿಸಿದರೆ, ಕೇರಳವು ಬಡತನದ ವಿರುದ್ಧ ಹೇಗೆ ಹೋರಾಡಬೇಕು ಎಂಬುದರ ಕುರಿತು ಭಾರತದ ಉಳಿದ ಭಾಗಗಳಿಗೆ ತೋರಿಸಲಿದೆ” ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಇಲ್ಲಿನ ಪರುತುಂಪಾರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, “ನಾವು ಹಲವಾರು ದಿನಗಳಲ್ಲಿ ಸರ್ಕಾರ ರಚಿಸಿದಾಗ ಮೊದಲಿಗೆ ನ್ಯಾಯ್ ಯೋಜನೆಯನ್ನು ಆರಂಭಿಸಲಿದ್ದೇವೆ’ ಎಂದು ಹೇಳಿದರು. ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆಯೂ ನ್ಯಾಯ್ ಯೋಜನೆಗೆ ಅವರು ನೀಡುವ ಮಹತ್ವವನ್ನು ಒತ್ತಿಹೇಳಿದ್ದರು.

‘ಇದನ್ನೇನೂ ಒಂದು ರೀತಿಯ ದಾನಧರ್ಮವಾಗಿ ಮಾಡಲು ಹೋಗುವುದಿಲ್ಲ. ಇದು ದಾನವಲ್ಲ. ನಾವು ನಿಮಗೆ ನ್ಯಾಯಯುತವಾಗಿ ನ್ಯಾಯ್ ಮೂಲಕ ಹಣವನ್ನು ನೀಡುತ್ತಿದ್ದೇವೆ.. ನಾವು ಹಣವನ್ನು ನಿಮ್ಮ ಜೇಬಿನಲ್ಲಿ ಇಡುತ್ತಿದ್ದೇವೆ. ಆದ್ದರಿಂದ ನೀವು ಹಣವನ್ನು ಖರ್ಚು ಮಾಡಬಹುದು’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೋಟು ಅಮಾನ್ಯೀಕರಣ, ಅವರ ದೋಷಪೂರಿತ ಜಿಎಸ್‌ಟಿ ಅನುಷ್ಠಾನ ಮತ್ತು ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ “ಕುಸಿದ” ಭಾರತೀಯ ಆರ್ಥಿಕತೆಯನ್ನು ಉನ್ನತೀಕರಿಸುವ ಏಕೈಕ ಮಾರ್ಗ ನ್ಯಾಯ್ ಆಗಿದೆ ಎಂದು ರಾಹುಲ್ ಹೇಳಿದ್ದಾರೆ.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೃಹಿಣಿಯರಿಗೆ 2000 ರೂ ‘ಪಿಂಚಣಿ’, ‘ನ್ಯಾಯ ಯೋಜನೆ’ ಅಡಿಯಲ್ಲಿ ಬಡವರಿಗೆ ವಾರ್ಷಿಕವಾಗಿ 72,000 ರೂ. ಮತ್ತು ದೀನದಲಿತರಿಗೆ ಐದು ಲಕ್ಷ ಮನೆಗಳ ನಿರ್ಮಾಣದ ಭರವಸೆ ನೀಡಿದೆ.


ಇದನ್ನೂ ಓದಿ: ರಾಹುಲ್‍ಗಾಂಧಿಯ `ನ್ಯಾಯ್’ ಸ್ವಾಗತಾರ್ಹ. ಆದರೆ, ಕೇಳಲೇಬೇಕಾದ ಪ್ರಶ್ನೆಗಳಿವೆ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...