Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...