Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...