Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...