Homeಮುಖಪುಟ’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

’RRR’ ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಇಡುತ್ತೇವೆ: BJP ರಾಜ್ಯಾಧ್ಯಕ್ಷನ ಬೆದರಿಕೆ

ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್‌‌ಟಿಆರ್‌ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ,‌ ಎಸ್‌‌.ಎಸ್‌. ರಾಜಮೌಳಿ ನಿರ್ದೇಶನದ ರೌದ್ರಂ ರಣಂ ರುಧಿರಂ (RRR) ಚಿತ್ರವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ಬಂಡಿ ಸಂಜಯ ಕುಮಾರ್‌ ಬೆದರಿಕೆ ಹಾಕಿದ್ದಾರೆ.

ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತ್ತು. ಪ್ರಸ್ತುತ ಟೀಸರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ಬುಡಕಟ್ಟು ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನ ಒಂದು ಭಾಗದಲ್ಲಿ ಅವರು ಮುಸ್ಲಿಂ ವೇಷಭೂಷಣದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ರಾಜಮೌಳಿ “ಐತಿಹಾಸಿಕ ಸಂಗತಿಗಳನ್ನು ವಿರೂಪಗೊಳಿಸುತ್ತಾರೆ” ಎಂದು ಆರೋಪಿಸಿದ ಬಿಜೆಪಿ ನಾಯಕ, “ವಿವಾದ ಸೃಷ್ಟಿಸಲು ರಾಜಮೌಳಿ ಕೊಮರಾಮ್ ಭೀಮ್‌ನ ತಲೆಯ ಮೇಲೆ ಟೋಪಿ ಹಾಕಿದರೆ, ನಾವು ಸುಮ್ಮನಿರುತ್ತೇವೆಯೇ? ಅದು ಎಂದಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಎಸ್.ಎಸ್.ರಾಜಮೌಳಿ ಮೇಲೆ ದೈಹಿಕವಾಗಿಯೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, “ನೀವು ಕೋಮರಾಮ್ ಭೀಮ್ ಅವರನ್ನು ದುರ್ಬಲಗೊಳಿಸುವ ಮೂಲಕ, ಆದಿವಾಸಿಗಳ ಭಾವನೆಗಳನ್ನು ಹಾಳು ಮಾಡುವ ಮೂಲಕ ಚಿತ್ರ ಮಾಡಲು ಹೊರಟರೆ, ನಿಮ್ಮ ಮೇಲೆ ಹಲ್ಲೆ ನಡೆಸುತ್ತೇವೆ. ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ, ಚಿತ್ರ ಪ್ರದರ್ಶನ ಮಾಡುವ ಪ್ರತಿಯೊಂದು ಚಿತ್ರಮಂದಿರಕ್ಕೂ ನಾವು ಬೆಂಕಿ ಹಚ್ಚುತ್ತೇವೆ” ಎಂದು ಬಂಡಿ ಸಂಜಯ್ ಕುಮಾರ್ ಎಚ್ಚರಿಸಿದ್ದಾರೆ.

RRR ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಕೋಮರಾಮ್ ಭೀಮ್ ಪಾತ್ರದಾರಿ ಆಗಿರುವ ಜೂನಿಯರ್‌ ಎನ್‌ಟಿಆರ್‌ ಸುರ್ಮಾ, ತಾಯತ ಮತ್ತು ತಲೆಗೆ ಟೋಪಿ ಧರಿಸಿದ್ದರು. ಇದು ಬಲಪಂಥೀಯ ಗುಂಪುಗಳನ್ನು ಕೆರಳಿಸಿದೆ.

ಆದರೆ ನಿರ್ದೇಶಕ ರಾಜಮೌಳಿ, “ಈ ಚಿತ್ರವು ಕೋಮರಾಮ್ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಎಂಬ ಇಬ್ಬರು ಅಪ್ರತಿಮ ಬುಡಕಟ್ಟು ನಾಯಕರನ್ನು ಆಧರಿಸಿ ನಿರ್ಮಿಸುತ್ತಿರುವ ಚಿತ್ರವಾಗಿದ್ದರೂ ಸಹ ಜೀವನಚರಿತ್ರೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟೀಸರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದವರು ಅದನ್ನು ವಿರೋಧಿಸುತ್ತಿದ್ದಾರೆ ಮತ್ತು ನಿರ್ದೇಶಕ ರಾಜಮೌಳಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದಾರೆ.
    ಮೊಟ್ಟಮೊದಲನೆಯದಾಗಿ ಇದು ಸಂಪೂರ್ಣವಾಗಿ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಂರವರ ಜೀವನಾಧಾರಿತ ಚಿತ್ರವಲ್ಲ, ಆದರೆ ಅವರ ಜೀವನದ ಕೆಲ ಘಟನೆಗಳನ್ನು ಫ್ಲಾಷ್‌ಬ್ಯಾಕ್‌ನಲ್ಲಿ ತೋರಿಸಲಾಗುತ್ತದೆ. ಇಂದಿನ ಕಾಲಘಟ್ಟದ ಪಾತ್ರಗಳಲ್ಲಿ ಅಲ್ಲೂರಿ ಸೀತಾರಾಮರಾಜು ಪಾತ್ರಧಾರಿಯಾದ ರಾಂಚರಣ್ ಒಬ್ಬ ಪೊಲೀಸ್ ಪಾತ್ರಧಾರಿಯಾಗಿಯೂ, ಕೊಮರಂ ಭೀಂ ಪಾತ್ರಧಾರಿ ಜ್ಯೂ.ಯನ್ ಟಿ ಆರ್ ಮುಸ್ಲಿಂ ಯುವಕನ ಪಾತ್ರಧಾರಿಯಾಗಿಯೂ ನಟಿಸುತ್ತಿದ್ದಾರೆ. ಅದನ್ನರಿಯದೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಇದರ ಕುರಿತಾಗಿ ವಿವರಣೆ ನೀಡಬೇಕಾದ ನಿರ್ದೇಶಕ ರಾಜಮೌಳಿ, ಈ ವಿವಾದಾತ್ಮಕ ಚರ್ಚೆಗಳಿಂದ ಚಲನಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮತ್ತು ಜನರಲ್ಲಿ ಪ್ರಚಾರ ಸಿಗುತ್ತದೆಂದು ಸುಮ್ಮನಿದ್ದಾರೆ. ಚಲನಚಿತ್ರರಂಗದ ಬಹುತೇಕರು ಬಯಸುವುದು ಇಂತಹದ್ದನ್ನೇ ಅಲ್ಲವೆ?
    ಸಧ್ಯಕ್ಕೆ ನಮ್ಮಲ್ಲಿಯೇ ಮೊದಲು ಎಂದು ಬ್ರೇಕಿಂಗ್ ನ್ಯೂಸ್‌ಗಳ ಯಾವ ಮೀಡಿಯಾಗಳೂ ಬಂದಿಲ್ಲವೆಂಬುದೇ ಸಮಾಧಾನದ ವಿಷಯ….
    ವಿಶ್ವನಾಥ ಎನ್ ಅಮಾಸ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...