Homeಕರ್ನಾಟಕ‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

- Advertisement -
- Advertisement -

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ. ಇಂದು ಅಂತಿಮ ಘಟ್ಟದ ನಿರ್ಣಾಯಕ ಹೋರಾಟ ನಡೆಯುತ್ತಿದೆ. ಆದರೂ, ಮಾದಿಗ ಸಮುದಾಯಗಳಿಗೆ ದೊರೆಯಬೇಕಾದ ಹಕ್ಕುಗಳು ಇನ್ನೂ ದೊರೆತಿಲ್ಲ. 

ಇಂದು (ಗುರುವಾರ) ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ, ಹೋರಾಟವು ಫ್ರೀಡಂ ಪಾರ್ಕಿನಿಂದ  ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಪಕ್ಕದ ಕೇರಳ, ಪಂಜಾಬ್ ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿ ತೊಡಕಾಗದ ಕಾನೂನುಗಳು ಕರ್ನಾಟಕದಲ್ಲಿ ಹೇಗೆ ಅಡ್ಡಿಯಾಗುತ್ತವೆ ಎಂದು ನಾವು ಸರ್ಕಾರವನ್ನು ಕೇಳಬೇಕಿದೆ. ಎಲ್ಲ ಸಮಯದಾಯಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ, ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು. 

ಎಡಗೈ ಸಮುದಾಯಗಳನ್ನು ಸಭೆಗೆ ಕರೆಯುತ್ತಾರೆ, ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ, ಸರ್ಕಾರ ತಮ್ಮ ಕ್ಯಾಬಿನೆಟ್ ಸಭೆಯಲ್ಲಿ ಎರಡು ವಾರಗಳ ಕಾಲ ಮುಂದೂಡಿತು. ಸಮುದಾಯಗಳನ್ನು ವಂಚಿಸಿತು. ಈಗ, ಸರ್ಕಾರವು 50,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆದೇಶಿಸಿದೆ. ಆದರೆ, ಒಳಮೀಸಲಾತಿಯನ್ನು ತಪ್ಪಿಸಿದೆ. ನಾನು ನೇಮಕಾತಿಯನ್ನು ನಿಲ್ಲಿಸಿ ಎಂದು ಕೇಳುತ್ತಿಲ್ಲ. ಬದಲಾಗಿ, ಎಲ್ಲ ಸಮುದಾಯದ ಯುವಜನರಿಗೂ ಉದ್ಯೋಗಳ ಅಗತ್ಯವಿದೆ ಎಂಬುದನ್ನು ಅರಿತು, ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಕೆ ಆಗಬೇಕೆಂದು ಆಗ್ರಹಿಸುತ್ತಿದ್ದೇವೆ. ಸರ್ಕಾರವು ಇದೇ ರೀತಿ ನಿರ್ಲಕ್ಷ್ಯ ಧೋರಣೆ ತಳೆದರೆ, ಈ ಹೋರಾಟವು ಫ್ರೀಡಂ ಪಾರ್ಕಿನಿಂದ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. 

“ನಾಗಮೋಹನ್ ದಾಸ್ ಕಮಿಟಿಯನ್ನು ರಚಿಸಿದಿರಿ, ಕೋಟ್ಯಂತರ ಹಣ ವ್ಯಯ ಮಾಡಿದಿರಿ. ಆದರೆ, ಆ ವರದಿಯನ್ನ ಮೂಲೆಗೊತ್ತಿದ್ದೀರಿ. ನಿಮಗೆ ಬೇಕಾದಂತೆ ನೀವು ಮಾಡುವುದಾದರೆ, ಕಮಿಟಿಗಳನ್ನು ಯಾಕೆ ರಚಿಸಿದಿರಿ. ಹಣವನ್ನೇಕೆ ವ್ಯಯಿಸಿದಿರಿ. ನಿಮ್ಮಿಚ್ಚೆಯಂತೆ ನೀವು ಒಳಮೀಸಲಾತಿಯನ್ನು ಬರೆದು, ಜಾರಿಗೊಳಿಸಿದ್ದರೆ, ನಾವು ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತಿದ್ದೆವು ಎಂದು ಕಿಡಿಕಾರಿದರು.

“ಗುರುವಾರ, (ಮಾರ್ಚ್ 12) ಸಂಪುಟ ಸಭೆ ನಡೆಯಲಿದೆ. ಸಿದ್ದರಾಮಯ್ಯನವರು ಇಂದಿನ ಸಭೆಯಲ್ಲಿಯೇ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಮುದಾಯದ ಹೋರಾಟಗಾರರು ಯಾವ ಕ್ರಮಕ್ಕೆ ಮುಂದಾಗುತ್ತಾರೆಯೋ, ಅದರಂತೆ ಇಡೀ ಸಮುದಾಯ ಮುನ್ನಡೆಯುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ಅವರು ‘ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್ಸಿ/ಎಸ್ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹೈಕಮಾಂಡ್ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್ ಹೈಕಮಾಂಡ್ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್ಸಿ/ಎಸ್ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. 

ಫೆಬ್ರವರಿ 27ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ಇಂದಿಗೆ ಮುಂದೂಡಲಾಗಿತ್ತು. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...