Homeಕರ್ನಾಟಕ‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

- Advertisement -
- Advertisement -

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ. ಇಂದು ಅಂತಿಮ ಘಟ್ಟದ ನಿರ್ಣಾಯಕ ಹೋರಾಟ ನಡೆಯುತ್ತಿದೆ. ಆದರೂ, ಮಾದಿಗ ಸಮುದಾಯಗಳಿಗೆ ದೊರೆಯಬೇಕಾದ ಹಕ್ಕುಗಳು ಇನ್ನೂ ದೊರೆತಿಲ್ಲ. 

ಇಂದು (ಗುರುವಾರ) ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ, ಹೋರಾಟವು ಫ್ರೀಡಂ ಪಾರ್ಕಿನಿಂದ  ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಪಕ್ಕದ ಕೇರಳ, ಪಂಜಾಬ್ ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿ ತೊಡಕಾಗದ ಕಾನೂನುಗಳು ಕರ್ನಾಟಕದಲ್ಲಿ ಹೇಗೆ ಅಡ್ಡಿಯಾಗುತ್ತವೆ ಎಂದು ನಾವು ಸರ್ಕಾರವನ್ನು ಕೇಳಬೇಕಿದೆ. ಎಲ್ಲ ಸಮಯದಾಯಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ, ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು. 

ಎಡಗೈ ಸಮುದಾಯಗಳನ್ನು ಸಭೆಗೆ ಕರೆಯುತ್ತಾರೆ, ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ, ಸರ್ಕಾರ ತಮ್ಮ ಕ್ಯಾಬಿನೆಟ್ ಸಭೆಯಲ್ಲಿ ಎರಡು ವಾರಗಳ ಕಾಲ ಮುಂದೂಡಿತು. ಸಮುದಾಯಗಳನ್ನು ವಂಚಿಸಿತು. ಈಗ, ಸರ್ಕಾರವು 50,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆದೇಶಿಸಿದೆ. ಆದರೆ, ಒಳಮೀಸಲಾತಿಯನ್ನು ತಪ್ಪಿಸಿದೆ. ನಾನು ನೇಮಕಾತಿಯನ್ನು ನಿಲ್ಲಿಸಿ ಎಂದು ಕೇಳುತ್ತಿಲ್ಲ. ಬದಲಾಗಿ, ಎಲ್ಲ ಸಮುದಾಯದ ಯುವಜನರಿಗೂ ಉದ್ಯೋಗಳ ಅಗತ್ಯವಿದೆ ಎಂಬುದನ್ನು ಅರಿತು, ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಕೆ ಆಗಬೇಕೆಂದು ಆಗ್ರಹಿಸುತ್ತಿದ್ದೇವೆ. ಸರ್ಕಾರವು ಇದೇ ರೀತಿ ನಿರ್ಲಕ್ಷ್ಯ ಧೋರಣೆ ತಳೆದರೆ, ಈ ಹೋರಾಟವು ಫ್ರೀಡಂ ಪಾರ್ಕಿನಿಂದ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. 

“ನಾಗಮೋಹನ್ ದಾಸ್ ಕಮಿಟಿಯನ್ನು ರಚಿಸಿದಿರಿ, ಕೋಟ್ಯಂತರ ಹಣ ವ್ಯಯ ಮಾಡಿದಿರಿ. ಆದರೆ, ಆ ವರದಿಯನ್ನ ಮೂಲೆಗೊತ್ತಿದ್ದೀರಿ. ನಿಮಗೆ ಬೇಕಾದಂತೆ ನೀವು ಮಾಡುವುದಾದರೆ, ಕಮಿಟಿಗಳನ್ನು ಯಾಕೆ ರಚಿಸಿದಿರಿ. ಹಣವನ್ನೇಕೆ ವ್ಯಯಿಸಿದಿರಿ. ನಿಮ್ಮಿಚ್ಚೆಯಂತೆ ನೀವು ಒಳಮೀಸಲಾತಿಯನ್ನು ಬರೆದು, ಜಾರಿಗೊಳಿಸಿದ್ದರೆ, ನಾವು ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತಿದ್ದೆವು ಎಂದು ಕಿಡಿಕಾರಿದರು.

“ಗುರುವಾರ, (ಮಾರ್ಚ್ 12) ಸಂಪುಟ ಸಭೆ ನಡೆಯಲಿದೆ. ಸಿದ್ದರಾಮಯ್ಯನವರು ಇಂದಿನ ಸಭೆಯಲ್ಲಿಯೇ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಮುದಾಯದ ಹೋರಾಟಗಾರರು ಯಾವ ಕ್ರಮಕ್ಕೆ ಮುಂದಾಗುತ್ತಾರೆಯೋ, ಅದರಂತೆ ಇಡೀ ಸಮುದಾಯ ಮುನ್ನಡೆಯುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ಅವರು ‘ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್ಸಿ/ಎಸ್ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹೈಕಮಾಂಡ್ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್ ಹೈಕಮಾಂಡ್ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್ಸಿ/ಎಸ್ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. 

ಫೆಬ್ರವರಿ 27ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ಇಂದಿಗೆ ಮುಂದೂಡಲಾಗಿತ್ತು. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...