Homeಕರ್ನಾಟಕಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು ಈ ಸರ್ಕಾರದ ಒಡೆದಾಳುವ ನೀತಿಯ ವಿರುದ್ಧ ತಮ್ಮ ಧೃಡತೆಯನ್ನು ಪ್ರತಿಜ್ಞೆ ಮೂಲಕ ಸ್ಪಷ್ಟ ಸಂದೇಶ ಕಳಿಸಿದ್ದೇವೆ” ಎಂದರು.

ಕಾರ್ಖಾನೆಗಳಿಗೆ ಭೂಮಿ ಬೇಕು ನಿಜ. ಇಲ್ಲಿರುವವರು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ಯಾವ ರೀತಿಯ ಅಭಿವೃದ್ಧಿ ಎಂದು ಯೋಚಿಸಬೇಕಿದೆ. ಕೆಲವೇ ಕೆಲವು ವ್ಯಕ್ತಿಗಳನ್ನು ಶ್ರೀಮಂತರನ್ನಾಗಿ ಮಾಡುವ ನೀತಿ ವಿರುದ್ಧ ನಮ್ಮ ಹೋರಾಟ. ರೈತರ ಭೂ ಸ್ವಾಧೀನದ ವಿರುದ್ದ ಶೇ.77ರಷ್ಟು ಜನರು ತಮ್ಮ ಅಸಮ್ಮತಿಯನ್ನು ಸೂಚಿಸಿ ಸರ್ಕಾರಕ್ಕೆ ಮನವಿಪತ್ರ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಆಡಳಿತ ನಡೆಸುವವರ ಕಣ್ಣು ದುಡಿಯುವ ಜನರ ಮೇಲಿದೆ. ಶೇಕಡ 60ರಷ್ಟಿರುವ ರೈತರು ಶೇಕಡ 60ರಷ್ಟು ಉದ್ಯೋಗ ಸೃಷ್ಟಿಸಿದ್ದೇವೆ. ನಮ್ಮನ್ನು ಶೇಕಡ 20ಕ್ಕೆ ಇಳಿಸುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಾಣಿಜ್ಯ ಒಪ್ಪಂದವನ್ನು ಆಗಿನ ಬಿಜೆಪಿ ನಾಯಕರಾಗಿದ್ದ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ವಿರೋಧಿಸಿದ್ದರು. ಕಾಂಗ್ರೆಸ್‌ ಸರ್ಕಾರದ ನೀತಿಯನ್ನು ಬಿಜೆಪಿ ವಿಮಾನಕ್ಕಿಂತ ಹೆಚ್ಚಿನ ವೇಗದಲ್ಲಿ ಜಾರಿ ಮಾಡಿತು. ಅದರ ಭಾಗವಾಗಿ ಬೆಂಗಳೂರು ಸುತ್ತಮುತ್ತಲಿನ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರ  ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಪಕ್ಷ ನಾಯಕರಾಗಿದ್ದಾಗ ನಿಮ್ಮ ಹೋರಾಟಕ್ಕೆ ನೂರಕ್ಕೆ ನೂರು ಬೆಂಬಲ ಎಂದು ಹೇಳಿ, ಬಲಾತ್ಕಾರದ ಭೂ ಸ್ವಾಧೀನ ವಿರೋಧಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ಬೇಸರ ಕಿಡಿಕಾರಿದರು.

ಸಚಿವರಾದ ಎಂ.ಬಿ ಪಾಟೀಲ್ ಮತ್ತು ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ 493 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಟ್ಟು ಉಳಿದ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರು ಹೊಸತೇನೂ ಹೇಳಿಲ್ಲ. ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿಯನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ರೈತಕುಲವನ್ನು ನಿರ್ವಂಶ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದರು.

ಹೈಕೋರ್ಟ್‌ ಆದೇಶ ಇದೆ ಎಂದು ಹೇಳಿ ಪ್ರತಿಭಟಿಸದಂತೆ ಮನವೊಲಿಸಲು ಮುಂದಾದರು. ನಾವು ಜನವಿರೋಧಿ ಕಾನೂನು ಉಲ್ಲಂಘಿಸುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಹೋರಾಟವನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

LIVE UPDATES ‘ದೇವನಹಳ್ಳಿ ಚಲೋ’ | ‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’ | ತಮ್ಮ ಭೂಮಿಯ ಮಣ್ಣಲ್ಲಿ ಗಿಡನೆಟ್ಟು ಸಂಕಲ್ಪ ಮಾಡಿದ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...