Homeಕರ್ನಾಟಕಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು ಈ ಸರ್ಕಾರದ ಒಡೆದಾಳುವ ನೀತಿಯ ವಿರುದ್ಧ ತಮ್ಮ ಧೃಡತೆಯನ್ನು ಪ್ರತಿಜ್ಞೆ ಮೂಲಕ ಸ್ಪಷ್ಟ ಸಂದೇಶ ಕಳಿಸಿದ್ದೇವೆ” ಎಂದರು.

ಕಾರ್ಖಾನೆಗಳಿಗೆ ಭೂಮಿ ಬೇಕು ನಿಜ. ಇಲ್ಲಿರುವವರು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ಯಾವ ರೀತಿಯ ಅಭಿವೃದ್ಧಿ ಎಂದು ಯೋಚಿಸಬೇಕಿದೆ. ಕೆಲವೇ ಕೆಲವು ವ್ಯಕ್ತಿಗಳನ್ನು ಶ್ರೀಮಂತರನ್ನಾಗಿ ಮಾಡುವ ನೀತಿ ವಿರುದ್ಧ ನಮ್ಮ ಹೋರಾಟ. ರೈತರ ಭೂ ಸ್ವಾಧೀನದ ವಿರುದ್ದ ಶೇ.77ರಷ್ಟು ಜನರು ತಮ್ಮ ಅಸಮ್ಮತಿಯನ್ನು ಸೂಚಿಸಿ ಸರ್ಕಾರಕ್ಕೆ ಮನವಿಪತ್ರ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಆಡಳಿತ ನಡೆಸುವವರ ಕಣ್ಣು ದುಡಿಯುವ ಜನರ ಮೇಲಿದೆ. ಶೇಕಡ 60ರಷ್ಟಿರುವ ರೈತರು ಶೇಕಡ 60ರಷ್ಟು ಉದ್ಯೋಗ ಸೃಷ್ಟಿಸಿದ್ದೇವೆ. ನಮ್ಮನ್ನು ಶೇಕಡ 20ಕ್ಕೆ ಇಳಿಸುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಾಣಿಜ್ಯ ಒಪ್ಪಂದವನ್ನು ಆಗಿನ ಬಿಜೆಪಿ ನಾಯಕರಾಗಿದ್ದ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ವಿರೋಧಿಸಿದ್ದರು. ಕಾಂಗ್ರೆಸ್‌ ಸರ್ಕಾರದ ನೀತಿಯನ್ನು ಬಿಜೆಪಿ ವಿಮಾನಕ್ಕಿಂತ ಹೆಚ್ಚಿನ ವೇಗದಲ್ಲಿ ಜಾರಿ ಮಾಡಿತು. ಅದರ ಭಾಗವಾಗಿ ಬೆಂಗಳೂರು ಸುತ್ತಮುತ್ತಲಿನ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರ  ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಪಕ್ಷ ನಾಯಕರಾಗಿದ್ದಾಗ ನಿಮ್ಮ ಹೋರಾಟಕ್ಕೆ ನೂರಕ್ಕೆ ನೂರು ಬೆಂಬಲ ಎಂದು ಹೇಳಿ, ಬಲಾತ್ಕಾರದ ಭೂ ಸ್ವಾಧೀನ ವಿರೋಧಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ಬೇಸರ ಕಿಡಿಕಾರಿದರು.

ಸಚಿವರಾದ ಎಂ.ಬಿ ಪಾಟೀಲ್ ಮತ್ತು ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ 493 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಟ್ಟು ಉಳಿದ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರು ಹೊಸತೇನೂ ಹೇಳಿಲ್ಲ. ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿಯನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ರೈತಕುಲವನ್ನು ನಿರ್ವಂಶ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದರು.

ಹೈಕೋರ್ಟ್‌ ಆದೇಶ ಇದೆ ಎಂದು ಹೇಳಿ ಪ್ರತಿಭಟಿಸದಂತೆ ಮನವೊಲಿಸಲು ಮುಂದಾದರು. ನಾವು ಜನವಿರೋಧಿ ಕಾನೂನು ಉಲ್ಲಂಘಿಸುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಹೋರಾಟವನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

LIVE UPDATES ‘ದೇವನಹಳ್ಳಿ ಚಲೋ’ | ‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’ | ತಮ್ಮ ಭೂಮಿಯ ಮಣ್ಣಲ್ಲಿ ಗಿಡನೆಟ್ಟು ಸಂಕಲ್ಪ ಮಾಡಿದ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...