Homeಕರ್ನಾಟಕಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು ಈ ಸರ್ಕಾರದ ಒಡೆದಾಳುವ ನೀತಿಯ ವಿರುದ್ಧ ತಮ್ಮ ಧೃಡತೆಯನ್ನು ಪ್ರತಿಜ್ಞೆ ಮೂಲಕ ಸ್ಪಷ್ಟ ಸಂದೇಶ ಕಳಿಸಿದ್ದೇವೆ” ಎಂದರು.

ಕಾರ್ಖಾನೆಗಳಿಗೆ ಭೂಮಿ ಬೇಕು ನಿಜ. ಇಲ್ಲಿರುವವರು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ಯಾವ ರೀತಿಯ ಅಭಿವೃದ್ಧಿ ಎಂದು ಯೋಚಿಸಬೇಕಿದೆ. ಕೆಲವೇ ಕೆಲವು ವ್ಯಕ್ತಿಗಳನ್ನು ಶ್ರೀಮಂತರನ್ನಾಗಿ ಮಾಡುವ ನೀತಿ ವಿರುದ್ಧ ನಮ್ಮ ಹೋರಾಟ. ರೈತರ ಭೂ ಸ್ವಾಧೀನದ ವಿರುದ್ದ ಶೇ.77ರಷ್ಟು ಜನರು ತಮ್ಮ ಅಸಮ್ಮತಿಯನ್ನು ಸೂಚಿಸಿ ಸರ್ಕಾರಕ್ಕೆ ಮನವಿಪತ್ರ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಆಡಳಿತ ನಡೆಸುವವರ ಕಣ್ಣು ದುಡಿಯುವ ಜನರ ಮೇಲಿದೆ. ಶೇಕಡ 60ರಷ್ಟಿರುವ ರೈತರು ಶೇಕಡ 60ರಷ್ಟು ಉದ್ಯೋಗ ಸೃಷ್ಟಿಸಿದ್ದೇವೆ. ನಮ್ಮನ್ನು ಶೇಕಡ 20ಕ್ಕೆ ಇಳಿಸುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಾಣಿಜ್ಯ ಒಪ್ಪಂದವನ್ನು ಆಗಿನ ಬಿಜೆಪಿ ನಾಯಕರಾಗಿದ್ದ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ವಿರೋಧಿಸಿದ್ದರು. ಕಾಂಗ್ರೆಸ್‌ ಸರ್ಕಾರದ ನೀತಿಯನ್ನು ಬಿಜೆಪಿ ವಿಮಾನಕ್ಕಿಂತ ಹೆಚ್ಚಿನ ವೇಗದಲ್ಲಿ ಜಾರಿ ಮಾಡಿತು. ಅದರ ಭಾಗವಾಗಿ ಬೆಂಗಳೂರು ಸುತ್ತಮುತ್ತಲಿನ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರ  ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಪಕ್ಷ ನಾಯಕರಾಗಿದ್ದಾಗ ನಿಮ್ಮ ಹೋರಾಟಕ್ಕೆ ನೂರಕ್ಕೆ ನೂರು ಬೆಂಬಲ ಎಂದು ಹೇಳಿ, ಬಲಾತ್ಕಾರದ ಭೂ ಸ್ವಾಧೀನ ವಿರೋಧಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ಬೇಸರ ಕಿಡಿಕಾರಿದರು.

ಸಚಿವರಾದ ಎಂ.ಬಿ ಪಾಟೀಲ್ ಮತ್ತು ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ 493 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಟ್ಟು ಉಳಿದ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರು ಹೊಸತೇನೂ ಹೇಳಿಲ್ಲ. ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿಯನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ರೈತಕುಲವನ್ನು ನಿರ್ವಂಶ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದರು.

ಹೈಕೋರ್ಟ್‌ ಆದೇಶ ಇದೆ ಎಂದು ಹೇಳಿ ಪ್ರತಿಭಟಿಸದಂತೆ ಮನವೊಲಿಸಲು ಮುಂದಾದರು. ನಾವು ಜನವಿರೋಧಿ ಕಾನೂನು ಉಲ್ಲಂಘಿಸುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಹೋರಾಟವನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

LIVE UPDATES ‘ದೇವನಹಳ್ಳಿ ಚಲೋ’ | ‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’ | ತಮ್ಮ ಭೂಮಿಯ ಮಣ್ಣಲ್ಲಿ ಗಿಡನೆಟ್ಟು ಸಂಕಲ್ಪ ಮಾಡಿದ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...