Homeಕರ್ನಾಟಕಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ- MES

- Advertisement -
- Advertisement -

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31 ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು (MES) ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆಯನ್ನೂ ನೀಡಿದ್ದು, “ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರದ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜಗಳು ಹಾರಾಡಲಿವೆ. ಜೊತೆಗೆ ಗಡಿ ವಿವಾದಕ್ಕೆ ಸಂಬಂಧಿಸಿದ ಘೋಷಣೆಗಳು ಮೊಳಗಲಿವೆ” ಎಂದು ಜಿಲ್ಲಾಡಳಿತಕ್ಕೆ ಸವಾಲು ಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಸಾವನ್ನಪ್ಪಿದ್ದ MES ಕಾರ್ಯಕರ್ತರ ನೆನಪಿಗಾಗಿ ಜನವರಿ 17 ರಂದು ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲು ಮರಾಠಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

MES ಅಧ್ಯಕ್ಷ ದೀಪಕ ದಳವಿ ಮಾತನಾಡಿ, “ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇದರಿಂದ ಮರಾಠಾ ಜನರ ಆತಂಕ ಮತ್ತು ವೇದನೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಇತ್ತೀಚೆಗೆ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಈ ಹಿಂದೆಯೂ, ಅಲ್ಲಿ ಕನ್ನಡ ಬಾವುಟ ಹಾರಿಸಿದ ಬೆನ್ನಲ್ಲೇ ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಇದೇ ರೀತಿ ಈಗಲೂ ತೆರವುಗೊಳಿಸಬಹುದೆಂಬ ಕಾರಣಕ್ಕೆ ಕನ್ನಡಪರ ಹೋರಾಟಗಾರರು ಕಂಬ ಹಾಗೂ ಬಾವುಟವನ್ನು ಕಾವಲು ಕಾಯುತ್ತಿದ್ದಾರೆ. ಕೊರೆವ ಚಳಿಯಲ್ಲೂ ರಾತ್ರಿಯಿಡೀ ಅಲ್ಲಿಯೇ ಮಲಗಿ, ಧ್ವಜಸ್ತಂಭ ತೆರವುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ.

“ಮಹಾನಗರ ಪಾಲಿಕೆ ಕಛೇರಿ ಸೇರಿದಂತೆ, ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಛೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ–ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ. ರಾಷ್ಟ್ರಧ್ವಜದ ಎದುರು ಈ ಧ್ವಜ ಹಾರಿಸಿ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು MES ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...