Homeಮುಖಪುಟಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಾಕೌಟ್‌ ಘೋಷಿಸಿ, ಹಲವು ಕಾರ್ಮಿಕರನ್ನು ಅಮಾನುತ್ತು ಮಾಡಿರುವುದನ್ನು ವಿರೋಧಿಸಿ 24 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರು ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, “ಲಾಕೌಟ್‌ ತೆರವುಗೊಳಿಸಿ ಎಂದು ಸರ್ಕಾರ ಸೂಚಿಸಿದರೂ ಕಂಪನಿ ದರ್ಪ ತೋರುತ್ತಿದೆ. ಕೆಲ ಕಾರ್ಮಿಕರು ಕಾರ್ಖಾನೆ ಪ್ರವೇಶಿಸಲು ಬಿಡುತ್ತಿಲ್ಲ. ಎರಡನೇ ಬಾರಿ ಲಾಕೌಟ್‌ ಘೋಷಿಸುವ ಮೂಲಕ ಕಾರ್ಮಿಕ ವಿರೋಧಿಯಾಗಿ ವರ್ತಿಸುತ್ತಿದೆ. ಕಾರ್ಮಿಕರ ಮೇಲಿನ ಅಮಾನತ್ತು ಹಿಂತೆಗೆದುಕೊಳ್ಳಬೇಕು ಮತ್ತು ಲಾಕೌಟ್‌ ತೆರವುಗೊಳಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದಿದ್ದಾರೆ.

ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಒಂದು ಕಾರು ತಯಾರಿಸಬೇಕಾಗಿದೆ. ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ “ಇಲ್ಲಿ ಅಮಾನವೀಯವಾಗಿ ಕಾರ್ಮಿಕರನ್ನು ಯಂತ್ರದಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಿ ಲಾಕೌಟ್‌ ಹೇರಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಅಮಾನತ್ತು ಮಾಡಲಾಗಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಮೂಲಕ ಪರೋಕ್ಷವಾಗಿ ಕಾರ್ಖಾನೆ ಪರವಾಗಿ ನಿಂತಿದೆ. ಹಾಗಾಗಿ ನಮಗೆ ಹೋರಾಟ ಅನಿವಾರ್ಯ ಎಂದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...