Homeಮುಖಪುಟಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಾಕೌಟ್‌ ಘೋಷಿಸಿ, ಹಲವು ಕಾರ್ಮಿಕರನ್ನು ಅಮಾನುತ್ತು ಮಾಡಿರುವುದನ್ನು ವಿರೋಧಿಸಿ 24 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರು ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, “ಲಾಕೌಟ್‌ ತೆರವುಗೊಳಿಸಿ ಎಂದು ಸರ್ಕಾರ ಸೂಚಿಸಿದರೂ ಕಂಪನಿ ದರ್ಪ ತೋರುತ್ತಿದೆ. ಕೆಲ ಕಾರ್ಮಿಕರು ಕಾರ್ಖಾನೆ ಪ್ರವೇಶಿಸಲು ಬಿಡುತ್ತಿಲ್ಲ. ಎರಡನೇ ಬಾರಿ ಲಾಕೌಟ್‌ ಘೋಷಿಸುವ ಮೂಲಕ ಕಾರ್ಮಿಕ ವಿರೋಧಿಯಾಗಿ ವರ್ತಿಸುತ್ತಿದೆ. ಕಾರ್ಮಿಕರ ಮೇಲಿನ ಅಮಾನತ್ತು ಹಿಂತೆಗೆದುಕೊಳ್ಳಬೇಕು ಮತ್ತು ಲಾಕೌಟ್‌ ತೆರವುಗೊಳಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದಿದ್ದಾರೆ.

ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಒಂದು ಕಾರು ತಯಾರಿಸಬೇಕಾಗಿದೆ. ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ “ಇಲ್ಲಿ ಅಮಾನವೀಯವಾಗಿ ಕಾರ್ಮಿಕರನ್ನು ಯಂತ್ರದಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಿ ಲಾಕೌಟ್‌ ಹೇರಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಅಮಾನತ್ತು ಮಾಡಲಾಗಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಮೂಲಕ ಪರೋಕ್ಷವಾಗಿ ಕಾರ್ಖಾನೆ ಪರವಾಗಿ ನಿಂತಿದೆ. ಹಾಗಾಗಿ ನಮಗೆ ಹೋರಾಟ ಅನಿವಾರ್ಯ ಎಂದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...