Homeಮುಖಪುಟಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಾಕೌಟ್‌ ಘೋಷಿಸಿ, ಹಲವು ಕಾರ್ಮಿಕರನ್ನು ಅಮಾನುತ್ತು ಮಾಡಿರುವುದನ್ನು ವಿರೋಧಿಸಿ 24 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರು ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, “ಲಾಕೌಟ್‌ ತೆರವುಗೊಳಿಸಿ ಎಂದು ಸರ್ಕಾರ ಸೂಚಿಸಿದರೂ ಕಂಪನಿ ದರ್ಪ ತೋರುತ್ತಿದೆ. ಕೆಲ ಕಾರ್ಮಿಕರು ಕಾರ್ಖಾನೆ ಪ್ರವೇಶಿಸಲು ಬಿಡುತ್ತಿಲ್ಲ. ಎರಡನೇ ಬಾರಿ ಲಾಕೌಟ್‌ ಘೋಷಿಸುವ ಮೂಲಕ ಕಾರ್ಮಿಕ ವಿರೋಧಿಯಾಗಿ ವರ್ತಿಸುತ್ತಿದೆ. ಕಾರ್ಮಿಕರ ಮೇಲಿನ ಅಮಾನತ್ತು ಹಿಂತೆಗೆದುಕೊಳ್ಳಬೇಕು ಮತ್ತು ಲಾಕೌಟ್‌ ತೆರವುಗೊಳಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದಿದ್ದಾರೆ.

ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಒಂದು ಕಾರು ತಯಾರಿಸಬೇಕಾಗಿದೆ. ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ “ಇಲ್ಲಿ ಅಮಾನವೀಯವಾಗಿ ಕಾರ್ಮಿಕರನ್ನು ಯಂತ್ರದಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಿ ಲಾಕೌಟ್‌ ಹೇರಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಅಮಾನತ್ತು ಮಾಡಲಾಗಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಮೂಲಕ ಪರೋಕ್ಷವಾಗಿ ಕಾರ್ಖಾನೆ ಪರವಾಗಿ ನಿಂತಿದೆ. ಹಾಗಾಗಿ ನಮಗೆ ಹೋರಾಟ ಅನಿವಾರ್ಯ ಎಂದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...