Homeಮುಖಪುಟಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಾಕೌಟ್‌ ಘೋಷಿಸಿ, ಹಲವು ಕಾರ್ಮಿಕರನ್ನು ಅಮಾನುತ್ತು ಮಾಡಿರುವುದನ್ನು ವಿರೋಧಿಸಿ 24 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರು ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, “ಲಾಕೌಟ್‌ ತೆರವುಗೊಳಿಸಿ ಎಂದು ಸರ್ಕಾರ ಸೂಚಿಸಿದರೂ ಕಂಪನಿ ದರ್ಪ ತೋರುತ್ತಿದೆ. ಕೆಲ ಕಾರ್ಮಿಕರು ಕಾರ್ಖಾನೆ ಪ್ರವೇಶಿಸಲು ಬಿಡುತ್ತಿಲ್ಲ. ಎರಡನೇ ಬಾರಿ ಲಾಕೌಟ್‌ ಘೋಷಿಸುವ ಮೂಲಕ ಕಾರ್ಮಿಕ ವಿರೋಧಿಯಾಗಿ ವರ್ತಿಸುತ್ತಿದೆ. ಕಾರ್ಮಿಕರ ಮೇಲಿನ ಅಮಾನತ್ತು ಹಿಂತೆಗೆದುಕೊಳ್ಳಬೇಕು ಮತ್ತು ಲಾಕೌಟ್‌ ತೆರವುಗೊಳಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದಿದ್ದಾರೆ.

ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಒಂದು ಕಾರು ತಯಾರಿಸಬೇಕಾಗಿದೆ. ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ “ಇಲ್ಲಿ ಅಮಾನವೀಯವಾಗಿ ಕಾರ್ಮಿಕರನ್ನು ಯಂತ್ರದಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಿ ಲಾಕೌಟ್‌ ಹೇರಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಅಮಾನತ್ತು ಮಾಡಲಾಗಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಮೂಲಕ ಪರೋಕ್ಷವಾಗಿ ಕಾರ್ಖಾನೆ ಪರವಾಗಿ ನಿಂತಿದೆ. ಹಾಗಾಗಿ ನಮಗೆ ಹೋರಾಟ ಅನಿವಾರ್ಯ ಎಂದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...