Homeಮುಖಪುಟಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ.

- Advertisement -
- Advertisement -

ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಾಕೌಟ್‌ ಘೋಷಿಸಿ, ಹಲವು ಕಾರ್ಮಿಕರನ್ನು ಅಮಾನುತ್ತು ಮಾಡಿರುವುದನ್ನು ವಿರೋಧಿಸಿ 24 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರು ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, “ಲಾಕೌಟ್‌ ತೆರವುಗೊಳಿಸಿ ಎಂದು ಸರ್ಕಾರ ಸೂಚಿಸಿದರೂ ಕಂಪನಿ ದರ್ಪ ತೋರುತ್ತಿದೆ. ಕೆಲ ಕಾರ್ಮಿಕರು ಕಾರ್ಖಾನೆ ಪ್ರವೇಶಿಸಲು ಬಿಡುತ್ತಿಲ್ಲ. ಎರಡನೇ ಬಾರಿ ಲಾಕೌಟ್‌ ಘೋಷಿಸುವ ಮೂಲಕ ಕಾರ್ಮಿಕ ವಿರೋಧಿಯಾಗಿ ವರ್ತಿಸುತ್ತಿದೆ. ಕಾರ್ಮಿಕರ ಮೇಲಿನ ಅಮಾನತ್ತು ಹಿಂತೆಗೆದುಕೊಳ್ಳಬೇಕು ಮತ್ತು ಲಾಕೌಟ್‌ ತೆರವುಗೊಳಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದಿದ್ದಾರೆ.

ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಒಂದು ಕಾರು ತಯಾರಿಸಬೇಕಾಗಿದೆ. ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ, ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತಾರೆ. ಇದನ್ನು ಪ್ರಶ್ನಿಸಿದ 40 ಕ್ಕೂ ಹೆಚ್ಚು ಜನರನ್ನು ಅಮಾನತ್ತು ಮಾಡಲಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ “ಇಲ್ಲಿ ಅಮಾನವೀಯವಾಗಿ ಕಾರ್ಮಿಕರನ್ನು ಯಂತ್ರದಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಿ ಲಾಕೌಟ್‌ ಹೇರಲಾಗಿದೆ. ಇದನ್ನು ಪ್ರಶ್ನಿಸಿದವರನ್ನು ಅಮಾನತ್ತು ಮಾಡಲಾಗಿದೆ. ಇಷ್ಟೆಲ್ಲ ಅನ್ಯಾಯ ನಡೆಯುತ್ತಿದ್ದರು ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿರುವ ಮೂಲಕ ಪರೋಕ್ಷವಾಗಿ ಕಾರ್ಖಾನೆ ಪರವಾಗಿ ನಿಂತಿದೆ. ಹಾಗಾಗಿ ನಮಗೆ ಹೋರಾಟ ಅನಿವಾರ್ಯ ಎಂದರು.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...