Homeಮುಖಪುಟಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

- Advertisement -
- Advertisement -

ಮಣಿಪುರ ಜನಾಂಗೀಯ ಸಂಘರ್ಷವನ್ನು ಪರಿಹರಿಸದಿದ್ದರೆ, ಅದು ದೇಶಕ್ಕೆ ಭದ್ರತಾ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಭಾನುವಾರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಎಚ್ಚರಿಸಿದ್ದಾರೆ.

ಪ್ರತಿಪಕ್ಷಗಳ INDIA ಮೈತ್ರಿಕೂಟದ ಸಂಸದರ ನಿಯೋಗವು ಮಣಿಪುರಕ್ಕೆ ಭೇಟಿ ನೀಡಿದ ನಂತರ ಅವರ ಅವಲೋಕನಗಳ ಕುರಿತು ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ  ಜ್ಞಾಪಕ ಪತ್ರವನ್ನು ಸಲ್ಲಿಸಿತು.

ರಾಜ್ಯಪಾಲರೊಂದಿಗಿನ ಸಭೆಯ ಬಳಿಕ ರಾಜಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಚೌಧರಿ, ”ರಾಜ್ಯಪಾಲರಿಗೆ ನಮ್ಮ ಅವಲೋಕನಗಳ ಬಗ್ಗೆ ತಿಳಿಸಿದೆವು. ಅವರು ಕೂಡ ಅದಕ್ಕೆ ಒಪ್ಪಿಗೆ ನೀಡಿದರು. ಅವರು ಹಿಂಸಾಚಾರದ ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಈ ಹಿಂಸಾಚಾರ ನಿಲ್ಲಬೇಕು ಎಂದರೆ  ಜನರೊಂದಿಗೆ ಮಾತನಾಡಲು ಸರ್ವಪಕ್ಷ ನಿಯೋಗ ಮಣಿಪುರಕ್ಕೆ ಭೇಟಿ ನೀಡಬೇಕು ಎಂದು ಸಲಹೆ ನೀಡಿದರು. ಸಮುದಾಯಗಳ ನಡುವಿನ ಅಪನಂಬಿಕೆಯನ್ನು ಹೋಗಲಾಡಿಸಬೇಕು” ಎಂದು ಹೇಳಿದರು.

ಭೇಟಿ ನೀಡುವ ಸಂಸದರು ಮಣಿಪುರದ ಬಗ್ಗೆ ತಮ್ಮ ಅವಲೋಕನಗಳನ್ನು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ ಎಂದು ಚೌಧರಿ ಹೇಳಿದರು.

ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಮಣಿಪುರ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದರು.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಗಲಭೆಗಳ ಸಂತ್ರಸ್ತರನ್ನು ಭೇಟಿ ಮಾಡಲು 21 ಸಂಸದರ ಪ್ರತಿಪಕ್ಷಗಳ ನಿಯೋಗ ಶನಿವಾರ ಮಣಿಪುರಕ್ಕೆ ಆಗಮಿಸಿದೆ.

ತಮ್ಮ ಎರಡು ದಿನಗಳ ಪ್ರವಾಸದ ಮೊದಲ ದಿನ, ಅವರು ಇಂಫಾಲ್, ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಮತ್ತು ಚುರಾಚಂದ್‌ಪುರದ ಹಲವಾರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದರು ಮತ್ತು ಜನಾಂಗೀಯ ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಿದರು.

ಚೌಧರಿ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಅವರಲ್ಲದೆ, ನಿಯೋಗದಲ್ಲಿ ಟಿಎಂಸಿಯ ಸುಶ್ಮಿತಾ ದೇವ್, ಜೆಎಂಎಂನ ಮಹುವಾ ಮಜಿ, ಡಿಎಂಕೆಯ ಕನಿಮೋಳಿ, ಆರ್‌ಎಲ್‌ಡಿಯ ಜಯಂತ್ ಚೌಧರಿ, ಆರ್‌ಜೆಡಿಯ ಮನೋಜ್ ಕುಮಾರ್ ಝಾ, ಆರ್‌ಎಸ್‌ಪಿ, ಜೆಡಿಯು ಮುಖ್ಯಸ್ಥ ಎನ್‌ಕೆ ಪ್ರೇಮಚಂದ್ರನ್ ಇದ್ದಾರೆ. ರಂಜನ್ (ಲಾಲನ್) ಸಿಂಗ್, ಅನೀಲ್ ಪ್ರಸಾದ್ ಹೆಗ್ಡೆ (ಜೆಡಿ-ಯು), ಸಿಪಿಐನ ಪಿ ಸಂತೋಷ್ ಕುಮಾರ್ ಮತ್ತು ಸಿಪಿಐ(ಎಂ) ನ ಎ ಎ ರಹೀಮ್ ಇತರರು.

ಮೇ 3 ರಿಂದ ಆರಂಭವಾದ ಈ ಮಣಿಪುರ ಹಿಂಸಾಚಾರದಲ್ಲಿ ಈವರೆಗೂ ಪ್ರತಿಭಟಿಸಲು 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಣಿಪುರ: ‘ಒಂದೇ ಸಭಾಂಗಣದಲ್ಲಿ 500 ಜನರು, ಸ್ನಾನಗೃಹವಿಲ್ಲ,’ -ಹೃದಯ ವಿದ್ರಾವಕವಾಗಿವೆ ಶಿಬಿರಗಳು; INDIA ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...