Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...