Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...