Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...