Homeಕರೋನಾ ತಲ್ಲಣ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳು ದೆಹಲಿಗೆ ಬೇಕು, ಆದರೆ ಮೇ ತಿಂಗಳಲ್ಲಿ ನಾವು 16 ಲಕ್ಷ ಡೋಸ್‌ ಮಾತ್ರ ಪಡೆದಿದ್ದೇವೆ ಎಂದು ಕೇಜ್ರಿವಾಲ್ ಮೋದಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ದೆಹಲಿಗೆ ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳಂತೆ ಒಟ್ಟು ಮೂರು ತಿಂಗಳು ಕೊರೊನಾ ಲಸಿಕೆಗಳ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಮೇ ತಿಂಗಳಲ್ಲಿ ರಾಜ್ಯವು ಕೇವಲ 16 ಲಕ್ಷ ಕೊರೊನಾ ಲಸಿಕೆ ಮಾತ್ರ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇಷ್ಟೊಂದು ನಿಧಾನವಾಗಿ ಲಸಿಕೆ ಪ್ರಕ್ರಿಯೆ ನಡೆದರೆ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿಗೆ ಕೊರೊನಾ ಲಸಿಕೆಯ ಕೋಟಾವನ್ನು ಹೆಚ್ಚಿಸಬೇಕೆಂದು ಈ ಹಿಂದೆ ಮಾಡಿದ್ದ ಮನವಿಯನ್ನು ಪುನರುಚ್ಚರಿಸಿದ ಅವರು, ಜಾಗತಿಕ ಟೆಂಡರ್‌ಗಳನ್ನು ಹೆಚ್ಚಿಸುವ ತೀರ್ಮಾನವನ್ನು ರಾಜ್ಯಗಳಿಗೆ ಬಿಡುವ ಬದಲು ರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ಲಸಿಕೆಗಳನ್ನು ಆಮದು ಮಾಡಿಕೊಳ್ಳುವಂತೆ ಕೇಂದ್ರವನ್ನು ಕೋರಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

“ಕೇಂದ್ರವು ನಮಗೆ ನೀಡಿರುವ ಕೊರೊನಾ ಲಸಿಕೆಯು ಮುಗಿದಿರುವುದರಿಂದ ಯುವಕರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ದೆಹಲಿಯಲ್ಲಿ ವ್ಯಾಕ್ಸಿನೇಷನ್‌ ಕೇಂದ್ರವನ್ನು ಯುವಕರಿಗೆ ಮುಚ್ಚಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ತಿಂಗಳಿಗೆ 80 ಲಕ್ಷ ಕೊರೊನಾ ಲಸಿಕೆಯಂತೆ ದೆಹಲಿಗೆ ಮೂರು ತಿಂಗಳು ಲಸಿಕೆ ಬೇಕಾಗುತ್ತದೆ. ಆದಾಗ್ಯೂ, ಮೇ ತಿಂಗಳಲ್ಲಿ ನಾವು ಕೇವಲ 16 ಲಕ್ಷ ಲಸಿಕೆ ಪ್ರಮಾಣವನ್ನು ಮಾತ್ರ ಸ್ವೀಕರಿಸಿದ್ದೇವೆ. ಈ ವೇಗದಲ್ಲಿ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೇಶದಲ್ಲಿ ಲಸಿಕೆ ಲಭ್ಯತೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ನಾಲ್ಕು ಮನವಿಗಳನ್ನು ಮಾಡಿದ್ದಾರೆ. “ಭಾರತದಲ್ಲಿ ಲಸಿಕೆ ತಯಾರಿಸುವ ಎಲ್ಲ ಕಂಪನಿಗಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ತಯಾರಿಸಲು ಆದೇಶಿಸಿ” ಎಂದು ದೆಹಲಿ ಸಿಎಂ ತಮ್ಮ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ.

ದೇಶದಲ್ಲಿ ಲಸಿಕೆಗಳನ್ನು ತಯಾರಿಸಲು ಅಂತಾರಾಷ್ಟ್ರೀಯ ಲಸಿಕೆ ತಯಾರಕರಿಗೆ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದ್ದಾರೆ.

ಕೇಂದ್ರವೇ ರಾಷ್ಟ್ರೀಯ ಮಟ್ಟದಲ್ಲಿ ಲಸಿಕೆಗಳನ್ನು ಆಮದು ಮಾಡಿಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...