Homeಕರೋನಾ ತಲ್ಲಣ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳು ದೆಹಲಿಗೆ ಬೇಕು, ಆದರೆ ಮೇ ತಿಂಗಳಲ್ಲಿ ನಾವು 16 ಲಕ್ಷ ಡೋಸ್‌ ಮಾತ್ರ ಪಡೆದಿದ್ದೇವೆ ಎಂದು ಕೇಜ್ರಿವಾಲ್ ಮೋದಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ದೆಹಲಿಗೆ ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳಂತೆ ಒಟ್ಟು ಮೂರು ತಿಂಗಳು ಕೊರೊನಾ ಲಸಿಕೆಗಳ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಮೇ ತಿಂಗಳಲ್ಲಿ ರಾಜ್ಯವು ಕೇವಲ 16 ಲಕ್ಷ ಕೊರೊನಾ ಲಸಿಕೆ ಮಾತ್ರ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇಷ್ಟೊಂದು ನಿಧಾನವಾಗಿ ಲಸಿಕೆ ಪ್ರಕ್ರಿಯೆ ನಡೆದರೆ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿಗೆ ಕೊರೊನಾ ಲಸಿಕೆಯ ಕೋಟಾವನ್ನು ಹೆಚ್ಚಿಸಬೇಕೆಂದು ಈ ಹಿಂದೆ ಮಾಡಿದ್ದ ಮನವಿಯನ್ನು ಪುನರುಚ್ಚರಿಸಿದ ಅವರು, ಜಾಗತಿಕ ಟೆಂಡರ್‌ಗಳನ್ನು ಹೆಚ್ಚಿಸುವ ತೀರ್ಮಾನವನ್ನು ರಾಜ್ಯಗಳಿಗೆ ಬಿಡುವ ಬದಲು ರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ಲಸಿಕೆಗಳನ್ನು ಆಮದು ಮಾಡಿಕೊಳ್ಳುವಂತೆ ಕೇಂದ್ರವನ್ನು ಕೋರಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

“ಕೇಂದ್ರವು ನಮಗೆ ನೀಡಿರುವ ಕೊರೊನಾ ಲಸಿಕೆಯು ಮುಗಿದಿರುವುದರಿಂದ ಯುವಕರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ದೆಹಲಿಯಲ್ಲಿ ವ್ಯಾಕ್ಸಿನೇಷನ್‌ ಕೇಂದ್ರವನ್ನು ಯುವಕರಿಗೆ ಮುಚ್ಚಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ತಿಂಗಳಿಗೆ 80 ಲಕ್ಷ ಕೊರೊನಾ ಲಸಿಕೆಯಂತೆ ದೆಹಲಿಗೆ ಮೂರು ತಿಂಗಳು ಲಸಿಕೆ ಬೇಕಾಗುತ್ತದೆ. ಆದಾಗ್ಯೂ, ಮೇ ತಿಂಗಳಲ್ಲಿ ನಾವು ಕೇವಲ 16 ಲಕ್ಷ ಲಸಿಕೆ ಪ್ರಮಾಣವನ್ನು ಮಾತ್ರ ಸ್ವೀಕರಿಸಿದ್ದೇವೆ. ಈ ವೇಗದಲ್ಲಿ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೇಶದಲ್ಲಿ ಲಸಿಕೆ ಲಭ್ಯತೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ನಾಲ್ಕು ಮನವಿಗಳನ್ನು ಮಾಡಿದ್ದಾರೆ. “ಭಾರತದಲ್ಲಿ ಲಸಿಕೆ ತಯಾರಿಸುವ ಎಲ್ಲ ಕಂಪನಿಗಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ತಯಾರಿಸಲು ಆದೇಶಿಸಿ” ಎಂದು ದೆಹಲಿ ಸಿಎಂ ತಮ್ಮ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ.

ದೇಶದಲ್ಲಿ ಲಸಿಕೆಗಳನ್ನು ತಯಾರಿಸಲು ಅಂತಾರಾಷ್ಟ್ರೀಯ ಲಸಿಕೆ ತಯಾರಕರಿಗೆ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದ್ದಾರೆ.

ಕೇಂದ್ರವೇ ರಾಷ್ಟ್ರೀಯ ಮಟ್ಟದಲ್ಲಿ ಲಸಿಕೆಗಳನ್ನು ಆಮದು ಮಾಡಿಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...