Homeಕರೋನಾ ತಲ್ಲಣ‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

‘ಇಷ್ಟು ನಿಧಾನಕ್ಕೆ ಪ್ರಕ್ರಿಯೆ ನಡೆದರೆ ದೆಹಲಿಯ ವಯಸ್ಕರಿಗೆ ಲಸಿಕೆ ನೀಡಲು 30 ತಿಂಗಳು ಬೇಕು: ಕೇಜ್ರೀವಾಲ್‌

ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳು ದೆಹಲಿಗೆ ಬೇಕು, ಆದರೆ ಮೇ ತಿಂಗಳಲ್ಲಿ ನಾವು 16 ಲಕ್ಷ ಡೋಸ್‌ ಮಾತ್ರ ಪಡೆದಿದ್ದೇವೆ ಎಂದು ಕೇಜ್ರಿವಾಲ್ ಮೋದಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ದೆಹಲಿಗೆ ಒಂದು ತಿಂಗಳಿಗೆ 80 ಲಕ್ಷ ಡೊಸ್‌ಗಳಂತೆ ಒಟ್ಟು ಮೂರು ತಿಂಗಳು ಕೊರೊನಾ ಲಸಿಕೆಗಳ ಅಗತ್ಯವಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಮೇ ತಿಂಗಳಲ್ಲಿ ರಾಜ್ಯವು ಕೇವಲ 16 ಲಕ್ಷ ಕೊರೊನಾ ಲಸಿಕೆ ಮಾತ್ರ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇಷ್ಟೊಂದು ನಿಧಾನವಾಗಿ ಲಸಿಕೆ ಪ್ರಕ್ರಿಯೆ ನಡೆದರೆ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿಗೆ ಕೊರೊನಾ ಲಸಿಕೆಯ ಕೋಟಾವನ್ನು ಹೆಚ್ಚಿಸಬೇಕೆಂದು ಈ ಹಿಂದೆ ಮಾಡಿದ್ದ ಮನವಿಯನ್ನು ಪುನರುಚ್ಚರಿಸಿದ ಅವರು, ಜಾಗತಿಕ ಟೆಂಡರ್‌ಗಳನ್ನು ಹೆಚ್ಚಿಸುವ ತೀರ್ಮಾನವನ್ನು ರಾಜ್ಯಗಳಿಗೆ ಬಿಡುವ ಬದಲು ರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ಲಸಿಕೆಗಳನ್ನು ಆಮದು ಮಾಡಿಕೊಳ್ಳುವಂತೆ ಕೇಂದ್ರವನ್ನು ಕೋರಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

“ಕೇಂದ್ರವು ನಮಗೆ ನೀಡಿರುವ ಕೊರೊನಾ ಲಸಿಕೆಯು ಮುಗಿದಿರುವುದರಿಂದ ಯುವಕರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ದೆಹಲಿಯಲ್ಲಿ ವ್ಯಾಕ್ಸಿನೇಷನ್‌ ಕೇಂದ್ರವನ್ನು ಯುವಕರಿಗೆ ಮುಚ್ಚಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ತಿಂಗಳಿಗೆ 80 ಲಕ್ಷ ಕೊರೊನಾ ಲಸಿಕೆಯಂತೆ ದೆಹಲಿಗೆ ಮೂರು ತಿಂಗಳು ಲಸಿಕೆ ಬೇಕಾಗುತ್ತದೆ. ಆದಾಗ್ಯೂ, ಮೇ ತಿಂಗಳಲ್ಲಿ ನಾವು ಕೇವಲ 16 ಲಕ್ಷ ಲಸಿಕೆ ಪ್ರಮಾಣವನ್ನು ಮಾತ್ರ ಸ್ವೀಕರಿಸಿದ್ದೇವೆ. ಈ ವೇಗದಲ್ಲಿ, ವಯಸ್ಕರಿಗೆ ಲಸಿಕೆ ಹಾಕಲು 30 ತಿಂಗಳು ಬೇಕಾಗುತ್ತದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೇಶದಲ್ಲಿ ಲಸಿಕೆ ಲಭ್ಯತೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ಕೇಂದ್ರಕ್ಕೆ ನಾಲ್ಕು ಮನವಿಗಳನ್ನು ಮಾಡಿದ್ದಾರೆ. “ಭಾರತದಲ್ಲಿ ಲಸಿಕೆ ತಯಾರಿಸುವ ಎಲ್ಲ ಕಂಪನಿಗಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ತಯಾರಿಸಲು ಆದೇಶಿಸಿ” ಎಂದು ದೆಹಲಿ ಸಿಎಂ ತಮ್ಮ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ.

ದೇಶದಲ್ಲಿ ಲಸಿಕೆಗಳನ್ನು ತಯಾರಿಸಲು ಅಂತಾರಾಷ್ಟ್ರೀಯ ಲಸಿಕೆ ತಯಾರಕರಿಗೆ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದ್ದಾರೆ.

ಕೇಂದ್ರವೇ ರಾಷ್ಟ್ರೀಯ ಮಟ್ಟದಲ್ಲಿ ಲಸಿಕೆಗಳನ್ನು ಆಮದು ಮಾಡಿಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...