Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...