Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...