Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...