Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...