Homeಮುಖಪುಟಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್...

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್ ರಾಥೋಡ್ ಪ್ರಶ್ನೆ

- Advertisement -
- Advertisement -

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರವರಿಗೆ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, “ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು” ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ. ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣವನ್ನು ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆಯಾದರೂ ನಿಮಗೆ ಇದೆಯೇ? ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಹೇಳಕೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರುವ ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ. ಕನ್ನಡಿಗರ ಸಾರ್ವಭೌಮತ್ವವನ್ನು ಕೆಣಕುವ ಪ್ರಯತ್ನ ಮಾಡಬೇಡಿ ಎಂದಿದ್ದಾರೆ.

ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಮತ ಹಾಕದಿದ್ದರೆ ಮೋದಿಯ ಆರ್ಶೀವಾದದಿಂದ ತಪ್ಪಿಸಿಕೊಳ್ಳುವಿರಿ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ “ರಾಜ್ಯದ ಮತದಾರರಿಗೆ ಬೆದರಿಕೆ ಹಾಕಿದ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂ ಮಂತರ್ ಬಾಬಾನಾ’ ಎಂದು ಪ್ರಶ್ನಿಸಿದೆ. ಬಿಜೆಪಿಗರೇ, ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ” ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...