Homeಮುಖಪುಟಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್...

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ? : ನಡ್ಡಾಗೆ ಪ್ರಕಾಶ್ ರಾಥೋಡ್ ಪ್ರಶ್ನೆ

- Advertisement -
- Advertisement -

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣ ಸ್ವೀಕರಿಸುವುದಿಲ್ಲವೇ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರವರಿಗೆ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, “ಕೇಂದ್ರದಿಂದ ಪ್ರಧಾನಿ ಮೋದಿ ಕಳುಹಿಸುವ ಹಣ ಪಡೆಯಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬೇಕು” ಎಂದು ಹೇಳಿದ್ದೀರಿ. ಇದು ಭಾರತದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಅಹಂಕಾರದ ಮಾತಾಗಿದೆ. ನಿಮ್ಮದು ಒಕ್ಕೂಟ ಸರ್ಕಾರ ಎನ್ನುವುದನ್ನು ಮರೆತು ಕನ್ನಡಿಗರಿಗೆ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದೀರಿ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ಕೇಂದ್ರದಿಂದ ಹಣ ಬರುವುದಿಲ್ಲ ಎನ್ನುವ ಅರ್ಥದಲ್ಲಿ ನಿಮ್ಮ ಮಾತು ಧ್ವನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದರೆ ನೀವು ಕನ್ನಡಿಗರ ತೆರಿಗೆ ಹಣವನ್ನು ಸ್ವೀಕರಿಸುವುದಿಲ್ಲವೇ? ಕನ್ನಡಿಗರು ಕನ್ನಡ ದ್ರೋಹಿಯಾದ ಬಿಜೆಪಿ ಸರ್ಕಾರಕ್ಕೆ ತೆರಿಗೆ ಹಣ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದರೆ ಅದರ ಪರಿಣಾಮ ಏನಾಗಬಹುದು ಎನ್ನುವ ಕಲ್ಪನೆಯಾದರೂ ನಿಮಗೆ ಇದೆಯೇ? ಭಾರತದ ಅಡಿಪಾಯ ಒಕ್ಕೂಟ ತತ್ವದ ಕಾರಣದಿಂದ ಈ ಕ್ಷಣಕ್ಕೂ ವಜ್ರದಷ್ಟು ಗಟ್ಟಿಯಾಗಿದೆ. ಇದನ್ನು ದುರ್ಬಲಗೊಳಿಸುವ ಪ್ರಯತ್ನ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಬ್ಯಾಂಕ್‌ಗಳನ್ನು ನುಂಗಿದಿರಿ. ಅದೇ ರೀತಿ ಕನ್ನಡಿಗರ ಪಾಲಿನ ಉದ್ಯೋಗದ ಅವಕಾಶಗಳು ಮತ್ತು ಬದುಕಿನ ಅವಕಾಶಗಳನ್ನು ನಿರಂತರವಾಗಿ ಕಿತ್ತುಕೊಳ್ಳುತ್ತಲೇ ಇದ್ದೀರಿ. ಈಗ ಕನ್ನಡದ ಮಕ್ಕಳು ಕುಡಿಯುವ ನಂದಿನಿ ಹಾಲಿನ ಮೇಲೂ ನಿಮ್ಮ ಕಣ್ಣು ಬಿದ್ದಿದೆ. ಇವೆಲ್ಲದರ ಆಚೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಮಾತ್ರ ಕೇಂದ್ರದ ಅನುದಾನ ಎನ್ನುವ ಅರ್ಥದಲ್ಲಿ ಮಾತನಾಡಿ ಬೆದರಿಕೆ ಹಾಕಿರುವುದನ್ನು ಕನ್ನಡಿಗರು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಹೇಳಕೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಬಿಜೆಪಿಗೆ ಇರುವುದು ನೆನ್ನೆ ಮೊನ್ನೆಯ ಇತಿಹಾಸ. ಕನ್ನಡ ಸಂಸ್ಕೃತಿ ಮತ್ತು ಕನ್ನಡತನ ಹಾಗೂ ಕನ್ನಡ ನೆಲಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಚರಿತ್ರೆ ಇದೆ. ಇದನ್ನು ಕೆಣಕುವ ಪ್ರಯತ್ನ ಮಾಡಬೇಡಿ. ನೀವು ಹಿಮಾಚಲ ಪ್ರದೇಶದಿಂದ ಬಂದು ಕನ್ನಡಿಗರ ಸಹನೆ ಮತ್ತು ಸ್ವಾಭಿಮಾನ ಕೆಣಕಬಾರದು. ನಿಮ್ಮ ರಾಜ್ಯದಲ್ಲೇ ನೀವು ನಿಮ್ಮ ಬಿಜೆಪಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇನ್ನು ಕರ್ನಾಟಕಕ್ಕೆ ಬಂದು ಈಗಾಗಲೇ ತುರ್ತುನಿಗಾ ಘಟಕದಲ್ಲಿ ಏದುಸಿರುವ ಬಿಡುತ್ತಿರುವ ಬಿಜೆಪಿಯ ಕುತ್ತಿಗೆ ಹಿಚುಕಬೇಡಿ. ಕನ್ನಡಿಗರ ಸಾರ್ವಭೌಮತ್ವವನ್ನು ಕೆಣಕುವ ಪ್ರಯತ್ನ ಮಾಡಬೇಡಿ ಎಂದಿದ್ದಾರೆ.

ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಮತ ಹಾಕದಿದ್ದರೆ ಮೋದಿಯ ಆರ್ಶೀವಾದದಿಂದ ತಪ್ಪಿಸಿಕೊಳ್ಳುವಿರಿ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ “ರಾಜ್ಯದ ಮತದಾರರಿಗೆ ಬೆದರಿಕೆ ಹಾಕಿದ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂ ಮಂತರ್ ಬಾಬಾನಾ’ ಎಂದು ಪ್ರಶ್ನಿಸಿದೆ. ಬಿಜೆಪಿಗರೇ, ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ” ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...