Homeಮುಖಪುಟಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

ಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

‘ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನದೊಂದಿಗೆ ಮಾತನಾಡುತ್ತಿಲ್ಲ’ ಎಂದು ನರೇಂದ್ರ ಮೋದಿ ಸರ್ಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದಾರೆ. ‘ನಾವು ಮಾತುಕತೆ ಪ್ರಾರಂಭಿಸದಿದ್ದರೆ, ಭವಿಷ್ಯದಲ್ಲಿ ನಾವೂ ಸಹ ಗಾಜಾದ ಪರಿಸ್ಥಿತಿ ಎದುರಿಸುಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ, ನಮ್ಮ ನೆರೆಹೊರೆಯವರನ್ನಲ್ಲ’ ಎಂಬ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ‘ಪ್ರಧಾನಿ ಮೋದಿಯವರು ಕೂಡ ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಮಾತುಕತೆ ಮೂಲಕ ವಿವಾದಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ಎಲ್ಲಿದೆ? ನವಾಜ್ ಷರೀಫ್ ಅವರು (ಪಾಕಿಸ್ತಾನದ) ಪ್ರಧಾನಿಯಾಗಿದ್ದಾಗ ನಾವು ಮಾತನಾಡಲು ಸಿದ್ಧ ಎಂದು ಅವರು ಹೇಳುತ್ತಿದ್ದರು. ಆದರೆ, ನಾವು ಮಾತನಾಡಲು ಸಿದ್ಧವಾಗಿಲ್ಲದಿರುವುದಕ್ಕೆ ಕಾರಣವೇನು’ ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

‘ಪರಸ್ಪರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ಗೂ ಆದ ಗತಿಯೆ ನಮಗೂ ಬರಲಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ಅಕ್ಟೋಬರ್ 7 ರ ದಾಳಿಗಳು ಮತ್ತು ನಂತರದ ಕ್ರೂರ ಪ್ರತಿದಾಳಿಯು 21,000ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಜಾದ ಹೆಚ್ಚಿನ ಭಾಗಗಳನ್ನು ಭಗ್ನಾವಶೇಷ ಮಾಡಿದೆ’ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಪೂಂಚ್‌ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಮಸೀದಿಯೊಳಗೆ ನಿವೃತ್ತ ಪೋಲೀಸ್‌ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅದರ ವಿಚಾರಣೆಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡ ನಂತರ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

‘ಕಣಿವೆ ರಾಜ್ಯಕ್ಕೆ ಪ್ರವಾಸಿಗರ ಆಗಮನವನ್ನು ಶಾಂತಿ ಎಂದು ಪ್ರಚಾರ ಮಾಡುವುದು ಭಯೋತ್ಪಾದನೆಯನ್ನು ಕೊನೆಗೊಳಿಸುವುದಿಲ್ಲ. ಅವರು ಆರ್ಟಿಕಲ್ 370 ರದ್ದತಿಯೊಂದಿಗೆ ಭಯೋತ್ಪಾದನೆ ಮುಗಿದಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ನಂತರವೂ ಭಯೋತ್ಪಾದನೆ ಇನ್ನೂ ಇದೆ. ನಾವು ನಿರ್ಮೂಲನೆ ಮಾಡಲು ಪ್ರಯತ್ನಿಸುವವರೆಗೂ ಕೊನೆಗೊಳ್ಳುವುದಿಲ್ಲ. ಭಯೋತ್ಪಾದನೆಯ ಮೂಲ ಕಾರಣವನ್ನು ಅರ್ಥಮಾಡಿಕೊಳ್ಳಿ’ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

‘ಪೊಲೀಸ್ ಅಧಿಕಾರಿಯ ಹತ್ಯೆಗೆ ನಾನು ವಿಷಾದಿಸುತ್ತೇನೆ. ಕಾಶ್ಮೀರ ಸಹಜಸ್ಥಿತಿಯಲ್ಲಿದೆ ಎಂದು ಹೇಳುವವರು ಮೌನವಾಗಿದ್ದಾರೆ. ಅವರು ಇದರ ಮೂಲ ಕಾರಣವನ್ನು ಪರಿಹರಿಸುವ ಬದಲು ಮೇಲ್ನೋಟದ ಗಾಯಗಳನ್ನು ವಾಸಿಮಾಡಲು ಪ್ರಯತ್ನಿಸಿದರು. ನಾವು ನಮ್ಮ ಸೈನಿಕರನ್ನು, ಅಧಿಕಾರಿಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬುದನ್ನು ಸಾಮಾನ್ಯರು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತವನ್ನು ಕೊನೆಗೊಳಿಸಲು ಕೇಂದ್ರವು ‘ಸರಿಯಾದ ದೃಷ್ಟಿಕೋನ’ ವನ್ನು ಕಂಡುಹಿಡಿಯಬೇಕಾಗಿದೆ. ‘ನಾವು ಭಾರತದ ಭಾಗವಾಗಿದ್ದೇವೆ, ನಾವು ಭಾರತದ ಭಾಗವಾಗಿದ್ದೇವೆ ಮತ್ತು ನಾವು ಭಾರತದ ಭಾಗವಾಗಿಯೇ ಉಳಿಯುತ್ತೇವೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾದರೆ, ಅದರ ನಿರ್ಮೂಲನೆಗೆ ಮಾರ್ಗಗಳನ್ನು ಹುಡುಕಬೇಕಾಗಿದೆ’ ಎಂದು ಅವರು ಹೇಳಿದರು.

‘ಮಿಲಿಟರಿ ಅಥವಾ ಪೊಲೀಸರ ಬಳಕೆಯಿಂದ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ನಾವು ಅದರ ಆಳವನ್ನು ಅರ್ಥಮಾಡಿಕೊಂಡು, ಮೂಲ ಕಾರಣವನ್ನು ಪರಿಹರಿಸಬೇಕು’ ಎಂದು ಅವರು ಹೇಳಿದರು.

‘ಭಯೋತ್ಪಾದಕರು ದಾಳಿ ಮಾಡಿದ್ದರಿಂದ ನಮ್ಮ ವೀರ ಸೈನಿಕರು ಹುತಾತ್ಮರಾದರು, ನಂತರ ಮೂವರು ಸ್ಥಳೀಯ ನಾಗರಿಕರನ್ನು ಚಿತ್ರಹಿಂಸೆಗೆ ಒಳಪಡಿಸಿರುವುದು ದುರಂತ. ಏಕೆಂದರೆ, ನಾವು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದೇವೆ; ನಮ್ಮ ಜನರ ವಿರುದ್ಧ ಅಲ್ಲ. ನಾವು ನಮ್ಮ ಜನರನ್ನು ಕಿರಿಕಿರಿಗೊಳಿಸಿದರೆ, ಎಂದಿಗೂ ಈ ಯುದ್ಧವನ್ನು ಗೆಲ್ಲುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...