Homeಮುಖಪುಟಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

ಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

‘ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನದೊಂದಿಗೆ ಮಾತನಾಡುತ್ತಿಲ್ಲ’ ಎಂದು ನರೇಂದ್ರ ಮೋದಿ ಸರ್ಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದಾರೆ. ‘ನಾವು ಮಾತುಕತೆ ಪ್ರಾರಂಭಿಸದಿದ್ದರೆ, ಭವಿಷ್ಯದಲ್ಲಿ ನಾವೂ ಸಹ ಗಾಜಾದ ಪರಿಸ್ಥಿತಿ ಎದುರಿಸುಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ, ನಮ್ಮ ನೆರೆಹೊರೆಯವರನ್ನಲ್ಲ’ ಎಂಬ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ‘ಪ್ರಧಾನಿ ಮೋದಿಯವರು ಕೂಡ ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಮಾತುಕತೆ ಮೂಲಕ ವಿವಾದಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ಎಲ್ಲಿದೆ? ನವಾಜ್ ಷರೀಫ್ ಅವರು (ಪಾಕಿಸ್ತಾನದ) ಪ್ರಧಾನಿಯಾಗಿದ್ದಾಗ ನಾವು ಮಾತನಾಡಲು ಸಿದ್ಧ ಎಂದು ಅವರು ಹೇಳುತ್ತಿದ್ದರು. ಆದರೆ, ನಾವು ಮಾತನಾಡಲು ಸಿದ್ಧವಾಗಿಲ್ಲದಿರುವುದಕ್ಕೆ ಕಾರಣವೇನು’ ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

‘ಪರಸ್ಪರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ಗೂ ಆದ ಗತಿಯೆ ನಮಗೂ ಬರಲಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ಅಕ್ಟೋಬರ್ 7 ರ ದಾಳಿಗಳು ಮತ್ತು ನಂತರದ ಕ್ರೂರ ಪ್ರತಿದಾಳಿಯು 21,000ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಜಾದ ಹೆಚ್ಚಿನ ಭಾಗಗಳನ್ನು ಭಗ್ನಾವಶೇಷ ಮಾಡಿದೆ’ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಪೂಂಚ್‌ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಮಸೀದಿಯೊಳಗೆ ನಿವೃತ್ತ ಪೋಲೀಸ್‌ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅದರ ವಿಚಾರಣೆಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡ ನಂತರ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

‘ಕಣಿವೆ ರಾಜ್ಯಕ್ಕೆ ಪ್ರವಾಸಿಗರ ಆಗಮನವನ್ನು ಶಾಂತಿ ಎಂದು ಪ್ರಚಾರ ಮಾಡುವುದು ಭಯೋತ್ಪಾದನೆಯನ್ನು ಕೊನೆಗೊಳಿಸುವುದಿಲ್ಲ. ಅವರು ಆರ್ಟಿಕಲ್ 370 ರದ್ದತಿಯೊಂದಿಗೆ ಭಯೋತ್ಪಾದನೆ ಮುಗಿದಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ನಂತರವೂ ಭಯೋತ್ಪಾದನೆ ಇನ್ನೂ ಇದೆ. ನಾವು ನಿರ್ಮೂಲನೆ ಮಾಡಲು ಪ್ರಯತ್ನಿಸುವವರೆಗೂ ಕೊನೆಗೊಳ್ಳುವುದಿಲ್ಲ. ಭಯೋತ್ಪಾದನೆಯ ಮೂಲ ಕಾರಣವನ್ನು ಅರ್ಥಮಾಡಿಕೊಳ್ಳಿ’ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

‘ಪೊಲೀಸ್ ಅಧಿಕಾರಿಯ ಹತ್ಯೆಗೆ ನಾನು ವಿಷಾದಿಸುತ್ತೇನೆ. ಕಾಶ್ಮೀರ ಸಹಜಸ್ಥಿತಿಯಲ್ಲಿದೆ ಎಂದು ಹೇಳುವವರು ಮೌನವಾಗಿದ್ದಾರೆ. ಅವರು ಇದರ ಮೂಲ ಕಾರಣವನ್ನು ಪರಿಹರಿಸುವ ಬದಲು ಮೇಲ್ನೋಟದ ಗಾಯಗಳನ್ನು ವಾಸಿಮಾಡಲು ಪ್ರಯತ್ನಿಸಿದರು. ನಾವು ನಮ್ಮ ಸೈನಿಕರನ್ನು, ಅಧಿಕಾರಿಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬುದನ್ನು ಸಾಮಾನ್ಯರು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತವನ್ನು ಕೊನೆಗೊಳಿಸಲು ಕೇಂದ್ರವು ‘ಸರಿಯಾದ ದೃಷ್ಟಿಕೋನ’ ವನ್ನು ಕಂಡುಹಿಡಿಯಬೇಕಾಗಿದೆ. ‘ನಾವು ಭಾರತದ ಭಾಗವಾಗಿದ್ದೇವೆ, ನಾವು ಭಾರತದ ಭಾಗವಾಗಿದ್ದೇವೆ ಮತ್ತು ನಾವು ಭಾರತದ ಭಾಗವಾಗಿಯೇ ಉಳಿಯುತ್ತೇವೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾದರೆ, ಅದರ ನಿರ್ಮೂಲನೆಗೆ ಮಾರ್ಗಗಳನ್ನು ಹುಡುಕಬೇಕಾಗಿದೆ’ ಎಂದು ಅವರು ಹೇಳಿದರು.

‘ಮಿಲಿಟರಿ ಅಥವಾ ಪೊಲೀಸರ ಬಳಕೆಯಿಂದ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ನಾವು ಅದರ ಆಳವನ್ನು ಅರ್ಥಮಾಡಿಕೊಂಡು, ಮೂಲ ಕಾರಣವನ್ನು ಪರಿಹರಿಸಬೇಕು’ ಎಂದು ಅವರು ಹೇಳಿದರು.

‘ಭಯೋತ್ಪಾದಕರು ದಾಳಿ ಮಾಡಿದ್ದರಿಂದ ನಮ್ಮ ವೀರ ಸೈನಿಕರು ಹುತಾತ್ಮರಾದರು, ನಂತರ ಮೂವರು ಸ್ಥಳೀಯ ನಾಗರಿಕರನ್ನು ಚಿತ್ರಹಿಂಸೆಗೆ ಒಳಪಡಿಸಿರುವುದು ದುರಂತ. ಏಕೆಂದರೆ, ನಾವು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದೇವೆ; ನಮ್ಮ ಜನರ ವಿರುದ್ಧ ಅಲ್ಲ. ನಾವು ನಮ್ಮ ಜನರನ್ನು ಕಿರಿಕಿರಿಗೊಳಿಸಿದರೆ, ಎಂದಿಗೂ ಈ ಯುದ್ಧವನ್ನು ಗೆಲ್ಲುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...