Homeಮುಖಪುಟಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

ಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

‘ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನದೊಂದಿಗೆ ಮಾತನಾಡುತ್ತಿಲ್ಲ’ ಎಂದು ನರೇಂದ್ರ ಮೋದಿ ಸರ್ಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದಾರೆ. ‘ನಾವು ಮಾತುಕತೆ ಪ್ರಾರಂಭಿಸದಿದ್ದರೆ, ಭವಿಷ್ಯದಲ್ಲಿ ನಾವೂ ಸಹ ಗಾಜಾದ ಪರಿಸ್ಥಿತಿ ಎದುರಿಸುಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ, ನಮ್ಮ ನೆರೆಹೊರೆಯವರನ್ನಲ್ಲ’ ಎಂಬ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ‘ಪ್ರಧಾನಿ ಮೋದಿಯವರು ಕೂಡ ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಮಾತುಕತೆ ಮೂಲಕ ವಿವಾದಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ಎಲ್ಲಿದೆ? ನವಾಜ್ ಷರೀಫ್ ಅವರು (ಪಾಕಿಸ್ತಾನದ) ಪ್ರಧಾನಿಯಾಗಿದ್ದಾಗ ನಾವು ಮಾತನಾಡಲು ಸಿದ್ಧ ಎಂದು ಅವರು ಹೇಳುತ್ತಿದ್ದರು. ಆದರೆ, ನಾವು ಮಾತನಾಡಲು ಸಿದ್ಧವಾಗಿಲ್ಲದಿರುವುದಕ್ಕೆ ಕಾರಣವೇನು’ ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

‘ಪರಸ್ಪರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ಗೂ ಆದ ಗತಿಯೆ ನಮಗೂ ಬರಲಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ಅಕ್ಟೋಬರ್ 7 ರ ದಾಳಿಗಳು ಮತ್ತು ನಂತರದ ಕ್ರೂರ ಪ್ರತಿದಾಳಿಯು 21,000ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಜಾದ ಹೆಚ್ಚಿನ ಭಾಗಗಳನ್ನು ಭಗ್ನಾವಶೇಷ ಮಾಡಿದೆ’ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಪೂಂಚ್‌ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಮಸೀದಿಯೊಳಗೆ ನಿವೃತ್ತ ಪೋಲೀಸ್‌ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅದರ ವಿಚಾರಣೆಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡ ನಂತರ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

‘ಕಣಿವೆ ರಾಜ್ಯಕ್ಕೆ ಪ್ರವಾಸಿಗರ ಆಗಮನವನ್ನು ಶಾಂತಿ ಎಂದು ಪ್ರಚಾರ ಮಾಡುವುದು ಭಯೋತ್ಪಾದನೆಯನ್ನು ಕೊನೆಗೊಳಿಸುವುದಿಲ್ಲ. ಅವರು ಆರ್ಟಿಕಲ್ 370 ರದ್ದತಿಯೊಂದಿಗೆ ಭಯೋತ್ಪಾದನೆ ಮುಗಿದಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ನಂತರವೂ ಭಯೋತ್ಪಾದನೆ ಇನ್ನೂ ಇದೆ. ನಾವು ನಿರ್ಮೂಲನೆ ಮಾಡಲು ಪ್ರಯತ್ನಿಸುವವರೆಗೂ ಕೊನೆಗೊಳ್ಳುವುದಿಲ್ಲ. ಭಯೋತ್ಪಾದನೆಯ ಮೂಲ ಕಾರಣವನ್ನು ಅರ್ಥಮಾಡಿಕೊಳ್ಳಿ’ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

‘ಪೊಲೀಸ್ ಅಧಿಕಾರಿಯ ಹತ್ಯೆಗೆ ನಾನು ವಿಷಾದಿಸುತ್ತೇನೆ. ಕಾಶ್ಮೀರ ಸಹಜಸ್ಥಿತಿಯಲ್ಲಿದೆ ಎಂದು ಹೇಳುವವರು ಮೌನವಾಗಿದ್ದಾರೆ. ಅವರು ಇದರ ಮೂಲ ಕಾರಣವನ್ನು ಪರಿಹರಿಸುವ ಬದಲು ಮೇಲ್ನೋಟದ ಗಾಯಗಳನ್ನು ವಾಸಿಮಾಡಲು ಪ್ರಯತ್ನಿಸಿದರು. ನಾವು ನಮ್ಮ ಸೈನಿಕರನ್ನು, ಅಧಿಕಾರಿಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬುದನ್ನು ಸಾಮಾನ್ಯರು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತವನ್ನು ಕೊನೆಗೊಳಿಸಲು ಕೇಂದ್ರವು ‘ಸರಿಯಾದ ದೃಷ್ಟಿಕೋನ’ ವನ್ನು ಕಂಡುಹಿಡಿಯಬೇಕಾಗಿದೆ. ‘ನಾವು ಭಾರತದ ಭಾಗವಾಗಿದ್ದೇವೆ, ನಾವು ಭಾರತದ ಭಾಗವಾಗಿದ್ದೇವೆ ಮತ್ತು ನಾವು ಭಾರತದ ಭಾಗವಾಗಿಯೇ ಉಳಿಯುತ್ತೇವೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾದರೆ, ಅದರ ನಿರ್ಮೂಲನೆಗೆ ಮಾರ್ಗಗಳನ್ನು ಹುಡುಕಬೇಕಾಗಿದೆ’ ಎಂದು ಅವರು ಹೇಳಿದರು.

‘ಮಿಲಿಟರಿ ಅಥವಾ ಪೊಲೀಸರ ಬಳಕೆಯಿಂದ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ನಾವು ಅದರ ಆಳವನ್ನು ಅರ್ಥಮಾಡಿಕೊಂಡು, ಮೂಲ ಕಾರಣವನ್ನು ಪರಿಹರಿಸಬೇಕು’ ಎಂದು ಅವರು ಹೇಳಿದರು.

‘ಭಯೋತ್ಪಾದಕರು ದಾಳಿ ಮಾಡಿದ್ದರಿಂದ ನಮ್ಮ ವೀರ ಸೈನಿಕರು ಹುತಾತ್ಮರಾದರು, ನಂತರ ಮೂವರು ಸ್ಥಳೀಯ ನಾಗರಿಕರನ್ನು ಚಿತ್ರಹಿಂಸೆಗೆ ಒಳಪಡಿಸಿರುವುದು ದುರಂತ. ಏಕೆಂದರೆ, ನಾವು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದೇವೆ; ನಮ್ಮ ಜನರ ವಿರುದ್ಧ ಅಲ್ಲ. ನಾವು ನಮ್ಮ ಜನರನ್ನು ಕಿರಿಕಿರಿಗೊಳಿಸಿದರೆ, ಎಂದಿಗೂ ಈ ಯುದ್ಧವನ್ನು ಗೆಲ್ಲುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...