Homeಮುಖಪುಟಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

ಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

‘ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನದೊಂದಿಗೆ ಮಾತನಾಡುತ್ತಿಲ್ಲ’ ಎಂದು ನರೇಂದ್ರ ಮೋದಿ ಸರ್ಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದಾರೆ. ‘ನಾವು ಮಾತುಕತೆ ಪ್ರಾರಂಭಿಸದಿದ್ದರೆ, ಭವಿಷ್ಯದಲ್ಲಿ ನಾವೂ ಸಹ ಗಾಜಾದ ಪರಿಸ್ಥಿತಿ ಎದುರಿಸುಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ, ನಮ್ಮ ನೆರೆಹೊರೆಯವರನ್ನಲ್ಲ’ ಎಂಬ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ‘ಪ್ರಧಾನಿ ಮೋದಿಯವರು ಕೂಡ ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಮಾತುಕತೆ ಮೂಲಕ ವಿವಾದಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ಎಲ್ಲಿದೆ? ನವಾಜ್ ಷರೀಫ್ ಅವರು (ಪಾಕಿಸ್ತಾನದ) ಪ್ರಧಾನಿಯಾಗಿದ್ದಾಗ ನಾವು ಮಾತನಾಡಲು ಸಿದ್ಧ ಎಂದು ಅವರು ಹೇಳುತ್ತಿದ್ದರು. ಆದರೆ, ನಾವು ಮಾತನಾಡಲು ಸಿದ್ಧವಾಗಿಲ್ಲದಿರುವುದಕ್ಕೆ ಕಾರಣವೇನು’ ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

‘ಪರಸ್ಪರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ಗೂ ಆದ ಗತಿಯೆ ನಮಗೂ ಬರಲಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ಅಕ್ಟೋಬರ್ 7 ರ ದಾಳಿಗಳು ಮತ್ತು ನಂತರದ ಕ್ರೂರ ಪ್ರತಿದಾಳಿಯು 21,000ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಜಾದ ಹೆಚ್ಚಿನ ಭಾಗಗಳನ್ನು ಭಗ್ನಾವಶೇಷ ಮಾಡಿದೆ’ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಪೂಂಚ್‌ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಮಸೀದಿಯೊಳಗೆ ನಿವೃತ್ತ ಪೋಲೀಸ್‌ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅದರ ವಿಚಾರಣೆಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡ ನಂತರ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

‘ಕಣಿವೆ ರಾಜ್ಯಕ್ಕೆ ಪ್ರವಾಸಿಗರ ಆಗಮನವನ್ನು ಶಾಂತಿ ಎಂದು ಪ್ರಚಾರ ಮಾಡುವುದು ಭಯೋತ್ಪಾದನೆಯನ್ನು ಕೊನೆಗೊಳಿಸುವುದಿಲ್ಲ. ಅವರು ಆರ್ಟಿಕಲ್ 370 ರದ್ದತಿಯೊಂದಿಗೆ ಭಯೋತ್ಪಾದನೆ ಮುಗಿದಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ನಂತರವೂ ಭಯೋತ್ಪಾದನೆ ಇನ್ನೂ ಇದೆ. ನಾವು ನಿರ್ಮೂಲನೆ ಮಾಡಲು ಪ್ರಯತ್ನಿಸುವವರೆಗೂ ಕೊನೆಗೊಳ್ಳುವುದಿಲ್ಲ. ಭಯೋತ್ಪಾದನೆಯ ಮೂಲ ಕಾರಣವನ್ನು ಅರ್ಥಮಾಡಿಕೊಳ್ಳಿ’ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

‘ಪೊಲೀಸ್ ಅಧಿಕಾರಿಯ ಹತ್ಯೆಗೆ ನಾನು ವಿಷಾದಿಸುತ್ತೇನೆ. ಕಾಶ್ಮೀರ ಸಹಜಸ್ಥಿತಿಯಲ್ಲಿದೆ ಎಂದು ಹೇಳುವವರು ಮೌನವಾಗಿದ್ದಾರೆ. ಅವರು ಇದರ ಮೂಲ ಕಾರಣವನ್ನು ಪರಿಹರಿಸುವ ಬದಲು ಮೇಲ್ನೋಟದ ಗಾಯಗಳನ್ನು ವಾಸಿಮಾಡಲು ಪ್ರಯತ್ನಿಸಿದರು. ನಾವು ನಮ್ಮ ಸೈನಿಕರನ್ನು, ಅಧಿಕಾರಿಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬುದನ್ನು ಸಾಮಾನ್ಯರು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತವನ್ನು ಕೊನೆಗೊಳಿಸಲು ಕೇಂದ್ರವು ‘ಸರಿಯಾದ ದೃಷ್ಟಿಕೋನ’ ವನ್ನು ಕಂಡುಹಿಡಿಯಬೇಕಾಗಿದೆ. ‘ನಾವು ಭಾರತದ ಭಾಗವಾಗಿದ್ದೇವೆ, ನಾವು ಭಾರತದ ಭಾಗವಾಗಿದ್ದೇವೆ ಮತ್ತು ನಾವು ಭಾರತದ ಭಾಗವಾಗಿಯೇ ಉಳಿಯುತ್ತೇವೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾದರೆ, ಅದರ ನಿರ್ಮೂಲನೆಗೆ ಮಾರ್ಗಗಳನ್ನು ಹುಡುಕಬೇಕಾಗಿದೆ’ ಎಂದು ಅವರು ಹೇಳಿದರು.

‘ಮಿಲಿಟರಿ ಅಥವಾ ಪೊಲೀಸರ ಬಳಕೆಯಿಂದ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ನಾವು ಅದರ ಆಳವನ್ನು ಅರ್ಥಮಾಡಿಕೊಂಡು, ಮೂಲ ಕಾರಣವನ್ನು ಪರಿಹರಿಸಬೇಕು’ ಎಂದು ಅವರು ಹೇಳಿದರು.

‘ಭಯೋತ್ಪಾದಕರು ದಾಳಿ ಮಾಡಿದ್ದರಿಂದ ನಮ್ಮ ವೀರ ಸೈನಿಕರು ಹುತಾತ್ಮರಾದರು, ನಂತರ ಮೂವರು ಸ್ಥಳೀಯ ನಾಗರಿಕರನ್ನು ಚಿತ್ರಹಿಂಸೆಗೆ ಒಳಪಡಿಸಿರುವುದು ದುರಂತ. ಏಕೆಂದರೆ, ನಾವು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದೇವೆ; ನಮ್ಮ ಜನರ ವಿರುದ್ಧ ಅಲ್ಲ. ನಾವು ನಮ್ಮ ಜನರನ್ನು ಕಿರಿಕಿರಿಗೊಳಿಸಿದರೆ, ಎಂದಿಗೂ ಈ ಯುದ್ಧವನ್ನು ಗೆಲ್ಲುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...