Homeಕರ್ನಾಟಕಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಬೇಡವಾದರೆ ಸಹಕರಿಸಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಬೇಡವಾದರೆ ಸಹಕರಿಸಿ: ಬಿ.ಎಸ್.ಯಡಿಯೂರಪ್ಪ

- Advertisement -
- Advertisement -

ಬೆಂಗಳೂರಿನಲ್ಲಿ ಮತ್ತೊಂದು ಲಾಕ್‌‌ಡೌನ್ ಬಯಸದಿದ್ದರೆ ಕೊರೊನಾ ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕ್ರಮಗಳನ್ನು ಅನುಸರಿಸಿ ಜನರು ಸಹಕರಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಇತ್ತೀಚಿಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್ ಹೇರುವ ಕುರಿತು ಮಾತುಕತೆ ನಡೆಸುತ್ತಿರುವ ಮಧ್ಯೆ, ವೈರಸ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಗುರುವಾರ ಮತ್ತು ಶುಕ್ರವಾರ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕವು ಹೆಚ್ಚುತ್ತಿದ್ದು, ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಕೆಲವು ಪ್ರದೇಶಗಳಿಗೆ ಮೊಹರು ಹಾಕಿದ್ದೇವೆ. ಇಂದು ಮಧ್ಯಾಹ್ನ ಕೃಷ್ಣ (ಸಿಎಂ ಅವರ ಗೃಹ ಕಚೇರಿ) ದಲ್ಲಿ ನಾನು ಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದು ಕೊರೊನಾವನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಚರ್ಚಿಸುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಳೆ ಮಧ್ಯಾಹ್ನ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಮತ್ತು ಮಂತ್ರಿಗಳ ಸಭೆಯನ್ನು ಕರೆದಿದ್ದು, ಅವರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯವನ್ನು ಪಡೆದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇನೆ” ಎಂದು ಹೇಳಿದರು.

ಮಂಗಳವಾರದಂದು ಕೊರೊನಾ ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪರಿಸ್ಥಿತಿ ಮುಂದುವರಿದರೆ ನಗರದಲ್ಲಿ ಲಾಕ್‌ಡೌನ್ ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕಾಗಬಹುದು ಎಂದು ಹೇಳಿದ್ದಾರೆ.

ಇದನ್ನು ಅನುಸರಿಸಿ ಬುಧವಾರ ಹಲವಾರು ಸಚಿವರು ತಜ್ಞರೊಂದಿಗೆ ಸಮಾಲೋಚಿಸಿದ ನಂತರವೇ ನಗರದಲ್ಲಿ ಮತ್ತೆ ಲಾಕ್‌ಡೌನ್ ಹೇರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದರು.

ಇಂದು ನಿಗದಿಯಾದ ಕ್ಯಾಬಿನೆಟ್ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೆಲವು ವರದಿಗಳು ಸೂಚಿಸಿವೆ.

ಈಗಾಗಲೇ ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ ಆರ್ ಮಾರುಕಟ್ಟೆ ಮತ್ತು ಕಲಾಸಿಪಾಲ್ಯ ಮಾರುಕಟ್ಟೆಯನ್ನು 15 ದಿನಗಳ ಕಾಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೀಲ್‌ಡೌನ್ ಮಾಡಿದೆ.

ನಿನ್ನೆ ಸಂಜೆಯವರೆಗೆ ನಗರದಲ್ಲಿ ಒಟ್ಟು 1,678 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 78 ಜನರು ಸಾವಿಗೀಡಾಗಿದ್ದು, 475 ಜನರು ಗುಣಮುಖರಾಗಿದ್ದಾರೆ.

ಜೂನ್ 1 ರ ವೇಳೆಗೆ ರಾಜ್ಯದಲ್ಲಿ 3,408 ರಷ್ಟಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಬುಧವಾರ 10,000 ದಾಟಿದೆ, ಸೋಂಕಿನ ಸಂಖ್ಯೆಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ.


ಓದಿ: ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...