Homeಮುಖಪುಟಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

ಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

- Advertisement -
- Advertisement -

ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾಗುವ ಅಗತ್ಯ ಸಂಖ್ಯೆಯಲ್ಲಿ ಕೊರತೆಯಾದತೆ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕೈಜೋಡಿಸಬಹುದು ಎಂದು ಸಿಪಿಐ(ಎಂ) ಪಶ್ಚಿಮ ಬಂಗಾಳದ ಕಾರ್ಯದರ್ಶಿ ಸೂರ್ಯ ಕಾಂತ ಮಿಶ್ರಾ ಹೇಳಿದ್ದು, ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಕೂಡಾ ಅವರು ಪ್ರಶ್ನಿಸಿದ್ದಾರೆ.

ಎಡಪಕ್ಷಗಳು, ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಚುನಾವಣಾ ದುಷ್ಕೃತ್ಯದ ಬಗ್ಗೆ ಚುನಾವಣಾ ಆಯೋಗಕ್ಕೆ ಹಲವಾರು ದೂರುಗಳನ್ನು ನೀಡಿದ್ದರೂ, “ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ, ಆಯೋಗವು ಟಿಎಂಸಿ ಮತ್ತು ಬಿಜೆಪಿ ಪಕ್ಷಗಳನ್ನು ಸಂತೋಷಪಡಿಸುವಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಸೂರ್ಯ ಕಾಂತ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಬಹುಮತ ಇಲ್ಲದಿದ್ದ ಸಂದರ್ಭದಲ್ಲಿ ಎಡಪಕ್ಷಗಳ ಮೈತ್ರಿಕೂಟವು ಟಿಎಂಸಿಯೊಂದಿಗೆ ಕೈಜೋಡಿಸುವ ಸಾಧ್ಯತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅದೊಂದು ಕಾಲ್ಪನಿಕ ಪ್ರಶ್ನೆ” ಎಂದರು.

ಇದನ್ನೂ ಓದಿ: ಛತ್ತೀಸ್‌ಗಢ: ಅಪಹರಿಸಿದ್ದ ಯೋಧನನ್ನು ಬಿಡುಗಡೆ ಮಾಡಿದ ಮಾವೋವಾದಿಗಳು

“ಎಡಪಕ್ಷಗಳ ಮೈತ್ರಿಯು ರಾಜ್ಯದಲ್ಲಿ ಸರ್ಕಾರ ರಚಿಸಲು ಹೋರಾಡುತ್ತಿದೆ. ಬಹುಮತ ಇಲ್ಲದ ಫಲಿತಾಂಶ ಬಂದರೆ, ಟಿಎಂಸಿ ಮತ್ತು ಬಿಜೆಪಿ ಕೈಜೋಡಿಸಿ ಸರ್ಕಾರ ರಚನೆ ಮಾಡುವುದನ್ನು ನೀವು ಕಾಣಬಹುದು” ಎಂದು ಮಿಶ್ರಾ ಹೇಳಿದ್ದಾರೆ.

“ಅದಕ್ಕಾಗಿಯೇ ಎರಡು ಪಕ್ಷಗಳು ಕೈಜೋಡಿಸಿದರೂ ಸರ್ಕಾರ ರಚಿಸಲು ಸಾಧ್ಯವಾಗಬಾರದು ಎಂದು ನಾವು ಜನರಿಗೆ ಮನವಿ ಮಾಡುತ್ತಿದ್ದೇವೆ” ಎಂದು ಮಿಶ್ರಾ ಹೇಳಿದ್ದಾರೆ.

ಈ ಬಾರಿ ಚುನಾವಣಾ ಆಯೋಗದ ತಟಸ್ಥತೆಯ ಬಗ್ಗೆ ಗಂಭೀರ ಪ್ರಶ್ನೆಗಳೆದ್ದಿವೆ ಎಂದು ಅವರು ಆರೋಪಿಸಿದ್ದಾರೆ.

“ನಾವು ಹಲವಾರು ದೂರುಗಳನ್ನು ದಾಖಲಿಸಿದ್ದೇವೆ, ಆದರೆ ಅವುಗಳಲ್ಲಿ ಯಾವುದನ್ನೂ ಪರಿಹರಿಸಲಾಗಿಲ್ಲ. ಹಲವಾರು ಘಟನೆಗಳು ನಡೆದಿವೆ, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಯೋಗವು ಟಿಎಂಸಿ ಮತ್ತು ಬಿಜೆಪಿಯನ್ನು ಸಂತೋಷಪಡಿಸುವ ನಿಟ್ಟಿನಲ್ಲಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ತೋರುತ್ತದೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯು ಟಿಎಂಸಿಯನ್ನು ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಎಂಟು ಹಂತಗಳಲ್ಲಿ ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಈಗಾಗಲೆ ಮೂರು ಹಂತಗಳು ಪೂರ್ಣಗೊಂಡಿವೆ.

ಇದನ್ನೂ ಓದಿ: ‘ವಿಮೆ, ಪರ್ಮಿಟ್ ಇಲ್ಲದೆ ಖಾಸಗಿ ಬಸ್‌ಗಳ ಓಡಾಟ’ – ಪತ್ರಕರ್ತರ ಪ್ರಶ್ನೆ ಸಿಟ್ಟಾದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...