Homeಕರ್ನಾಟಕಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

ಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು, “ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷವಿದ್ದರೆ ತೋರಿಸಿ. ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ” ಎಂದು ಸವಾಲು ಹಾಕಿದ್ದಾರೆ.

ಜೆಡಿಎಸ್‌ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. “ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದು, ಜೆಡಿಎಸ್‌ ಇದನ್ನು ಬೆಂಬಲಿಸಲಿದೆಯೇ?” ಎಂದು ಕೇಳಲಾದ ಪ್ರಶ್ನೆಗೆ ದೇವೇಗೌಡರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಎಲ್ಲ ಪಕ್ಷಗಳೂ ಬಿಜೆಪಿ ಜತೆ ನೇರವಾಗಿ ಅಥವಾ ಪರೋಕ್ಷವಾಗಿ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ‌ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆ ಬಗ್ಗೆ ಚಿಂತಿಸುವುದಿಲ್ಲ. ಈಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳು ಬರಲಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ನನಗೆ ಈಗ 91 ವರ್ಷ ವಯಸ್ಸು. ಈಗ‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ವಿಧಾನಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಎಲ್ಲ ಹಂತಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಪಕ್ಷವನ್ನು ಮತ್ತೆ ಬಲವಾಗಿ ಕಟ್ಟುವುದು ತಮ್ಮ ಮುಂದಿನ ಗುರಿ” ಎಂದಿದ್ದಾರೆ.

ಇದರ ನಡುವೆ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಚಿಂತಿಸುತ್ತಿರುವುದಾಗಿ ವರದಿಗಳಾಗಿವೆ. ಬಿಜೆಪಿ ಗೆಲ್ಲಬಹುದಾದ 15 ರಿಂದ 18 ಕ್ಷೇತ್ರಗಳತ್ತ ಗಮನ ಹರಿಸಿ, 5-6 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ನಿಟ್ಟಿನಲ್ಲಿಯೂ ಕಸರತ್ತುಗಳು ನಡೆಯುತ್ತಿವೆ.

ಇದನ್ನೂ ಓದಿರಿ: ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಐದು ಗ್ಯಾರಂಟಿಗಳನ್ನು ಹಂತಹಂತವಾಗಿ ಜಾರಿಗೆ ತರುತ್ತಿದೆ. ಇದು ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪ್ರಭಾವಿಸುವ ಸಾಧ್ಯತೆ ಇದೆ. 2019ರ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಮುಂದಿನ ಚುನಾವಣೆಯಲ್ಲಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದಕ್ಕೆ ಯಾವುದೇ ಖಾತ್ರಿ ಇಲ್ಲ. ಹೀಗಾಗಿ ಮೈತ್ರಿ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ.

28 ಕ್ಷೇತ್ರಗಳ ಪೈಕಿ ಬಿಜೆಪಿ 20 ರಿಂದ 22 ಸ್ಥಾನಗಳನ್ನು ಗೆದ್ದು, ಜೆಡಿಎಸ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಡಬಹುದು. ಹೀಗಾಗಿ ಜೆಡಿಎಸ್‌ ಒಪ್ಪಿದರೆ ಮೈತ್ರಿ ಲೇಸು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...