Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ:...

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ: ಸಿದ್ದರಾಮಯ್ಯ

ಭ್ರಷ್ಟಾಚಾರದ ಕುರಿತು ಗುತ್ತಿಗೆದಾರರ ಸಂಘ ಮುಖಂಡ ಕೆಂಪಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ

- Advertisement -
- Advertisement -

‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ’ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

“ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆ ಆಗಬೇಕಿದೆಯಂತೆ. ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ” ಎಂದು ಸಿದ್ದರಾಮಯ್ಯು ಹೇಳಿದ್ದಾರೆ.

“ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ:  ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ” ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು ‘ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ’ ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...