Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ:...

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ: ಸಿದ್ದರಾಮಯ್ಯ

ಭ್ರಷ್ಟಾಚಾರದ ಕುರಿತು ಗುತ್ತಿಗೆದಾರರ ಸಂಘ ಮುಖಂಡ ಕೆಂಪಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ

- Advertisement -
- Advertisement -

‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ’ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

“ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆ ಆಗಬೇಕಿದೆಯಂತೆ. ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ” ಎಂದು ಸಿದ್ದರಾಮಯ್ಯು ಹೇಳಿದ್ದಾರೆ.

“ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ:  ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ” ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು ‘ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ’ ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...