Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ:...

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಸವಾಲು ಸ್ವೀಕರಿಸಲಿ: ಸಿದ್ದರಾಮಯ್ಯ

ಭ್ರಷ್ಟಾಚಾರದ ಕುರಿತು ಗುತ್ತಿಗೆದಾರರ ಸಂಘ ಮುಖಂಡ ಕೆಂಪಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ

- Advertisement -
- Advertisement -

‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ’ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, “ಬಿಜೆಪಿಯವರು ತಾವು ಭ್ರಷ್ಟಾಚಾರವನ್ನೇ ಮಾಡಿಲ್ಲ, ತಮ್ಮಂತಹ ಪ್ರಾಮಾಣಿಕರು, ಸತ್ಯವಂತರು ಯಾರಿಲ್ಲ ಎನ್ನುತ್ತಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡುತ್ತೇವೆ, ಒಂದು ವೇಳೆ ನಮ್ಮಿಂದ ಸಾಬೀತು ಮಾಡಲು ಆಗಿಲ್ಲ ಎಂದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ, ನಾವದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಇರುವ ಸಮಸ್ಯೆಯೇನು? ರಾಜ್ಯ ಬಿಜೆಪಿ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೂ ಈ ಸವಾಲನ್ನು ಸ್ವೀಕರಿಸಲಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದೆ, ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ 20-25 ಜನ ಪದಾಧಿಕಾರಿಗಳು ಬಂದು ನನ್ನನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಅದಾದ ನಂತರ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಮನವಿ ಪತ್ರ ನೀಡಿದ್ದರು. ಸರ್ಕಾರ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

“ಟೆಂಡರ್‌ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ, ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ಸಾಗುತ್ತಿದೆ ಎಂದು ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟಾಚಾರವನ್ನು ತೆರೆದಿಟ್ಟಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿ ಇಂದ ಸುಮಾರು 22,000 ಕೋಟಿಗೂ ಅಧಿಕ ಬಿಲ್ ಹಣ ಬಿಡುಗಡೆ ಆಗಬೇಕಿದೆಯಂತೆ. ಈ ಬೃಹತ್‌ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದರ ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್‌ ಕರೆಯುತ್ತಾರೆ, ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ? ಎಂಬುದು ಅವರ ಪ್ರಶ್ನೆಯಾಗಿದೆ” ಎಂದು ಸಿದ್ದರಾಮಯ್ಯು ಹೇಳಿದ್ದಾರೆ.

“ಒಟ್ಟಾರೆ ಗುತ್ತಿಗೆದಾರರು ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಬೇಸರಗೊಂಡಿದ್ದಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಇರಲಿಲ್ಲ ಎಂಬುದು ಅವರ ಅಳಲು. ನ್ಯಾಯಾಂಗ ತನಿಖೆಗೆ ನಡೆಸಿದರೆ ತನಿಖೆ ವೇಳೆ ಸೂಕ್ತ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆ ಏನಿರಬಹುದು ಎಂದು ಕಾದು ನೋಡಬೇಕು” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ:  ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

“ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ” ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ತಮ್ಮ ಸ್ಥಾನಕ್ಕಿರುವ ಘನತೆ, ಗೌರವ ಮರೆತು ‘ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್‌ ಸರ್ಕಾರ’ ಎಂದು ಆಧಾರ ರಹಿತ ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು, ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ಹೀಗಿದ್ದಾಗ ನ್ಯಾಯಯುತ ತನಿಖೆ ಆಗಬೇಕೋ ಬೇಡವೋ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...